<p><strong>ಯಲಬುರ್ಗಾ</strong>: ತಾಲ್ಲೂಕಿನ ಗುನ್ನಾಳ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಪಟ್ಟಣದ ಹೊರವಲಯದಲ್ಲಿರುವ ಕೊಪ್ಪಳ ವಿ.ವಿ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಗುರುವಾರ ಶಾಸಕ ಬಸವರಾಜ ರಾಯರಡ್ಡಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಾಲೇಜಿನ ಮುಖ್ಯಸ್ಥರೊಂದಿಗೆ ಅಗತ್ಯ ಸೌಲಭ್ಯ ಹಾಗೂ ಸಿಬ್ಬಂದಿ ಕುರಿತು ಮಾಹಿತಿ ಸಂಗ್ರಹಿಸಿ ಅಭಿವೃದ್ಧಿಗೆ ಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದರು.</p>.<p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತಮಟ್ಟದ ಹಾಗೂ ಗುಣಮಟ್ಟದ ಶಿಕ್ಷಣದ ಅನುಕೂಲ ಕಲ್ಪಿಸಿಕೊಡಲು ಗುನ್ನಾಳ ಗ್ರಾಮದಲ್ಲಿ ಡಿಪ್ಲೋಮಾ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ. ಇದರ ಪ್ರಯೋಜನ ಪಡೆದುಕೊಳ್ಳುವಂತೆ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.</p>.<p>ಸ್ಥಳೀಯ ಪಿಜಿ ಕೇಂದ್ರಕ್ಕೆ ಸೌಲಭ್ಯಗಳ ಜತೆ ವಸತಿ ನಿಯಲ ಹಾಗೂ ಇನ್ನಿತರ ಅವಶ್ಯಕತೆಗಳನ್ನು ಒದಗಿಸಲಾಗುವುದು, ಮಾದರಿ ಕೇಂದ್ರವನ್ನಾಗಿ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ. ಅದಕ್ಕೆ ತಕ್ಕಂತೆ ಕೇಂದ್ರವನ್ನು ಮುನ್ನೆಡೆಸಿಕೊಂಡು ಹೋಗುವುದು ಮತ್ತು ಅಭಿವೃದ್ಧಿಗೊಳಿಸುವುದು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು.</p>.<p>ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಕೆ.ವಿ. ಪ್ರಸಾದ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ ಎಳವಟ್ಟಿ, ಪ್ರಾಧ್ಯಾಪಕ ಬಸವರಾಜ ಈಳಿಗನೂರ, ಕೊಪ್ಪಳದ ಕೇಂದ್ರದ ಸಿ.ಐ.ಛಲವಾದಿ, ಮುಖಂಡರಾದ ಸುಧೀರ ಕೊರ್ಲಳ್ಳಿ, ಶರಣಪ್ಪ ಗಾಂಜಿ, ಡಾ.ಶಿವನಗೌಡ ದಾನರಡ್ಡಿ, ಮಲ್ಲು ಜಕ್ಕಲಿ, ಅಪ್ಪಣ್ಣ ಜೋಶಿ, ರುದ್ರಪ್ಪ ಮರಕಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ತಾಲ್ಲೂಕಿನ ಗುನ್ನಾಳ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಪಟ್ಟಣದ ಹೊರವಲಯದಲ್ಲಿರುವ ಕೊಪ್ಪಳ ವಿ.ವಿ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಗುರುವಾರ ಶಾಸಕ ಬಸವರಾಜ ರಾಯರಡ್ಡಿ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಾಲೇಜಿನ ಮುಖ್ಯಸ್ಥರೊಂದಿಗೆ ಅಗತ್ಯ ಸೌಲಭ್ಯ ಹಾಗೂ ಸಿಬ್ಬಂದಿ ಕುರಿತು ಮಾಹಿತಿ ಸಂಗ್ರಹಿಸಿ ಅಭಿವೃದ್ಧಿಗೆ ಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದರು.</p>.<p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತಮಟ್ಟದ ಹಾಗೂ ಗುಣಮಟ್ಟದ ಶಿಕ್ಷಣದ ಅನುಕೂಲ ಕಲ್ಪಿಸಿಕೊಡಲು ಗುನ್ನಾಳ ಗ್ರಾಮದಲ್ಲಿ ಡಿಪ್ಲೋಮಾ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ. ಇದರ ಪ್ರಯೋಜನ ಪಡೆದುಕೊಳ್ಳುವಂತೆ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.</p>.<p>ಸ್ಥಳೀಯ ಪಿಜಿ ಕೇಂದ್ರಕ್ಕೆ ಸೌಲಭ್ಯಗಳ ಜತೆ ವಸತಿ ನಿಯಲ ಹಾಗೂ ಇನ್ನಿತರ ಅವಶ್ಯಕತೆಗಳನ್ನು ಒದಗಿಸಲಾಗುವುದು, ಮಾದರಿ ಕೇಂದ್ರವನ್ನಾಗಿ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ. ಅದಕ್ಕೆ ತಕ್ಕಂತೆ ಕೇಂದ್ರವನ್ನು ಮುನ್ನೆಡೆಸಿಕೊಂಡು ಹೋಗುವುದು ಮತ್ತು ಅಭಿವೃದ್ಧಿಗೊಳಿಸುವುದು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು.</p>.<p>ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಕೆ.ವಿ. ಪ್ರಸಾದ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ ಎಳವಟ್ಟಿ, ಪ್ರಾಧ್ಯಾಪಕ ಬಸವರಾಜ ಈಳಿಗನೂರ, ಕೊಪ್ಪಳದ ಕೇಂದ್ರದ ಸಿ.ಐ.ಛಲವಾದಿ, ಮುಖಂಡರಾದ ಸುಧೀರ ಕೊರ್ಲಳ್ಳಿ, ಶರಣಪ್ಪ ಗಾಂಜಿ, ಡಾ.ಶಿವನಗೌಡ ದಾನರಡ್ಡಿ, ಮಲ್ಲು ಜಕ್ಕಲಿ, ಅಪ್ಪಣ್ಣ ಜೋಶಿ, ರುದ್ರಪ್ಪ ಮರಕಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>