<p><strong>ಜೇವರ್ಗಿ:</strong> ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅವರ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅವರನ್ನು ಜೇವರ್ಗಿಯಿಂದ ಯಾದಗಿರಿ ಜಿಲ್ಲೆಯ ಡಯಟ್ ಹಿರಿಯ ಉಪನ್ಯಾಸಕರಾಗಿ ವರ್ಗಾವಣೆ ಮಾಡಿರುವುದನ್ನು ತಕ್ಷಣ ರದ್ದುಗೊಳಿಸಬೇಕು. ಇನಾಮದಾರ ಅವರು ಪ್ರಾಮಾಣಿಕ, ದಕ್ಷ ಅಧಿಕಾರಿಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷವೂ ಪೂರ್ಣಗೊಂಡಿಲ್ಲ. ಇನಾಮದಾರ ಅವರು ಅಧಿಕಾರ ವಹಿಸಿಕೊಂಡ ನಂತರ ತಾಲ್ಲೂಕಿನಲಿರುವ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅವರು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.</p>.<p>ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ಸಂದರ್ಭದಲ್ಲಿ ದಸಂಸ ತಾಲೂಕು ಸಂಚಾಲಕ ಸಿದ್ರಾಮ ಕಟ್ಟಿ ಕೋಳಕೂರ, ಶಿವಕುಮಾರ ಹೆಗಡೆ, ಬಸವರಾಜ ಕಟ್ಟಿ, ಮರೆಪ್ಪ ಆಂದೋಲಾ, ಶ್ರೀನಾಥ ಕಟ್ಟಿಸಂಗಾವಿ, ದೇವರಾಜ ಕಟ್ಟಿಮನಿ, ಅಶೋಖ ಹರವಾಳ, ಕಲ್ಲಪ್ಪ ಪೂಜಾರಿ ರಾಸಣಗಿ, ಲಕ್ಷ್ಮಣ ಡೊಳ್ಳೆ, ನಿಂಗಣ್ಣ ಧರೇನ್ ಸೊನ್ನ, ಪ್ರಭುನಂದ ಕಟ್ಟಿಮನಿ, ದೇವರಾಜ ಬಣಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ:</strong> ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅವರ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅವರನ್ನು ಜೇವರ್ಗಿಯಿಂದ ಯಾದಗಿರಿ ಜಿಲ್ಲೆಯ ಡಯಟ್ ಹಿರಿಯ ಉಪನ್ಯಾಸಕರಾಗಿ ವರ್ಗಾವಣೆ ಮಾಡಿರುವುದನ್ನು ತಕ್ಷಣ ರದ್ದುಗೊಳಿಸಬೇಕು. ಇನಾಮದಾರ ಅವರು ಪ್ರಾಮಾಣಿಕ, ದಕ್ಷ ಅಧಿಕಾರಿಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷವೂ ಪೂರ್ಣಗೊಂಡಿಲ್ಲ. ಇನಾಮದಾರ ಅವರು ಅಧಿಕಾರ ವಹಿಸಿಕೊಂಡ ನಂತರ ತಾಲ್ಲೂಕಿನಲಿರುವ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅವರು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.</p>.<p>ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ಸಂದರ್ಭದಲ್ಲಿ ದಸಂಸ ತಾಲೂಕು ಸಂಚಾಲಕ ಸಿದ್ರಾಮ ಕಟ್ಟಿ ಕೋಳಕೂರ, ಶಿವಕುಮಾರ ಹೆಗಡೆ, ಬಸವರಾಜ ಕಟ್ಟಿ, ಮರೆಪ್ಪ ಆಂದೋಲಾ, ಶ್ರೀನಾಥ ಕಟ್ಟಿಸಂಗಾವಿ, ದೇವರಾಜ ಕಟ್ಟಿಮನಿ, ಅಶೋಖ ಹರವಾಳ, ಕಲ್ಲಪ್ಪ ಪೂಜಾರಿ ರಾಸಣಗಿ, ಲಕ್ಷ್ಮಣ ಡೊಳ್ಳೆ, ನಿಂಗಣ್ಣ ಧರೇನ್ ಸೊನ್ನ, ಪ್ರಭುನಂದ ಕಟ್ಟಿಮನಿ, ದೇವರಾಜ ಬಣಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>