ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಖುದ್ದು ಮನವಿ ಸಲ್ಲಿಸಿದ ಬಿ.ಜಿ. ಪಾಟೀಲ ಅವರು, ‘ಪ್ರಾದೇಶಿಕ ಆಯುಕ್ತರ ಕಚೇರಿಯನ್ನು ರದ್ದುಗೊಳಿಸುವ ಸಂಬಂಧ ಚರ್ಚೆಗಳು ನಡೆದಿವೆ. ಆದರೆ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳು ಬೆಂಗಳೂರಿನಿಂದ ಸುಮಾರು 700 ಕಿ.ಮೀ ದೂರ ಇವೆ. ಎಲ್ಲ ವಿಷಯಕ್ಕೂ ಇಷ್ಟು ದೂರ ಪ್ರಯಾಣಿಸಿ ಬೆಂಗಳೂರಿಗೆ ಅಲೆಯುವುದು ಈ ಭಾಗದ ಜನರಿಗೆ ಹೊರೆಯಾಗಲಿದೆ. ಅಲ್ಲದೇ, ಆಡಳಿತ ಸುಧಾರಣೆಗೂ ಸಾಕಷ್ಟು ಸಮಯ ವ್ಯರ್ಥವಾಗಲಿದೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.