ಕೋವಿಡ್ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಬಹಿರಂಗ ಸಮಾವೇಶ, ರಾಜಕೀಯ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನರು ಸೇರುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆ ನಿರ್ಬಂಧವನ್ನು ಉಲ್ಲಂಘಿಸಿ ಯಾತ್ರೆ ಆಯೋಜಿಸಿದ್ದಲ್ಲದೇ ರಾತ್ರಿ ಕರ್ಫ್ಯೂ ನಿಯಮಗಳನ್ನು ಮೀರಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಪ್ರಯುಕ್ತ ತಹಶೀಲ್ದಾರ್ ಪ್ರಕಾಶ ಕುದರಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಕಲಬುರ್ಗಿ ಪೊಲೀಸ್ ಕಮಿಷನರ್ ಡಾ. ವೈ.ಎಸ್. ರವಿಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.