ಹೊರಹಾಕುವ ಪ್ರಶ್ನೆಯೇ ಇಲ್ಲ: ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ. ಉಮೇಶ ಜಾಧವ ಅವರನ್ನು ಪಕ್ಷದಿಂದ ಹೊರಹಾಕುವ ಪ್ರಶ್ನೆಯೇ ಇಲ್ಲ. ಅವರನ್ನು ಯಾರು, ಏಕೆ ಹೊರ ಹಾಕುತ್ತಾರೆ. ಅವರೊಬ್ಬ ಜವಾಬ್ದಾರಿಯುತ ಶಾಸಕ, ಹಿರಿಯರು. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಹೇಳಿದ್ದಾರೆ. ಅದನ್ನು ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಬಹಳ ದಿನಗಳಾಗಿಲ್ಲ. ದೊಡ್ಡ ದೊಡ್ಡ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಮಯ ಬೇಕಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.