ಜಿಲ್ಲಾಡಳಿತ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆದಿದೆಯಾದರೂ ಅಲ್ಲಿ ಸಾಮಾನು ಸರಂಜಾಮುಗಳನ್ನು ಇಡುವಷ್ಟು ಜಾಗ ಇಲ್ಲ. ಹೀಗಾಗಿ, ಕೆಲ ಕುಟುಂಬಗಳವರು ಟ್ರ್ಯಾಕ್ಟರ್ನಲ್ಲಿ ಹಾಸಿಗೆ, ಹೊದಿಕೆ, ಬಟ್ಟೆ, ಗ್ಯಾಸ್ ಸಿಲಿಂಡರ್, ಒಲೆ, ದಿನಸಿ ವಸ್ತುಗಳನ್ನು ಹೇರಿಕೊಂಡು ಊರದ ಹೊರವಲಯದಲ್ಲಿರುವ ಹೊಲಗಳಿಗೆ ತೆರಳಿದರು.