<p><strong>ಯಡ್ರಾಮಿ:</strong> ‘ದೇಶದ ಇತಿಹಾಸದಲ್ಲಿ ಹೆಣ್ಣು, ಹೊನ್ನು, ಮಣ್ಣು ಮತ್ತು ಸಾಮ್ರಾಜ್ಯಕ್ಕಾಗಿ ಯುದ್ಧ ನಡೆದರೆ; ಭೀಮಾ ಕೋರೆಗಾಂವ ಸ್ವಾಭಿಮಾನಕ್ಕಾಗಿ ನಡೆದ ಯುದ್ಧವಾಗಿದೆ’ ಎಂದು ಉಪನ್ಯಾಸಕ ಅಶೋಕ ದೊಡ್ಮನಿ ಹೇಳಿದರು.</p>.<p>ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಏರ್ಪಡಿಸಿದ್ದ 208ನೇ ಭೀಮಾ ಕೋರೆಗಾಂವ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘2ನೇ ಬಾಜಿರಾವ್ ತಮ್ಮ ಸೈನ್ಯದಲ್ಲಿ ಸೇರಿಸಿಕೊಳ್ಳದೆ ಅವಮಾನಿಸಿದ್ದ ಹಿನ್ನೆಲೆಯಲ್ಲಿ 1818 ಜನವರಿ 1 ರಂದು ಸ್ವಾಭಿಮಾನಕ್ಕಾಗಿ ನಡೆದ ಯುದ್ಧದಲ್ಲಿ ಮಹರ್ ರೆಜಿಮೆಂಟ್ ಸೈನ್ಯ ಪೇಶ್ವೆಯ 28 ಸಾವಿರ ಸೈನಿಕರನ್ನು ಕೇವಲ 500 ಮಹರ್ ಸೈನಿಕರು ಸೋಲಿಸಿದ್ದು ಇತಿಹಾಸವನ್ನು ಬಾಬಾಸಾಹೇಬರು ಹುಡುಕಿ ನಮಗೆ ತಿಳಿಸಿದ್ದಾರೆ’ ಎಂದರು.</p>.<p>ರುಕುಮ್ ಪಟೇಲ್ ಇಜೇರಿ, ಲಾಲಯ್ಯ ಗುತ್ತೇದಾರ, ಈರಣ್ಣ ಅವರಾದಿ, ಅಣ್ಣರಾಯ ಯಂಕಂಚಿ, ಅಮೀರ್ ಹಮಿಜ್ ಲಖನಾಪುರ, ಅಲ್ಲಪಟೇಲ್, ಈರಣ್ಣ ತಳವಾರ, ಪಿಡಿಒ ನಂದಕುಮಾರ್, ಕಾಲಿದಮಿಯಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಡ್ರಾಮಿ:</strong> ‘ದೇಶದ ಇತಿಹಾಸದಲ್ಲಿ ಹೆಣ್ಣು, ಹೊನ್ನು, ಮಣ್ಣು ಮತ್ತು ಸಾಮ್ರಾಜ್ಯಕ್ಕಾಗಿ ಯುದ್ಧ ನಡೆದರೆ; ಭೀಮಾ ಕೋರೆಗಾಂವ ಸ್ವಾಭಿಮಾನಕ್ಕಾಗಿ ನಡೆದ ಯುದ್ಧವಾಗಿದೆ’ ಎಂದು ಉಪನ್ಯಾಸಕ ಅಶೋಕ ದೊಡ್ಮನಿ ಹೇಳಿದರು.</p>.<p>ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಏರ್ಪಡಿಸಿದ್ದ 208ನೇ ಭೀಮಾ ಕೋರೆಗಾಂವ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘2ನೇ ಬಾಜಿರಾವ್ ತಮ್ಮ ಸೈನ್ಯದಲ್ಲಿ ಸೇರಿಸಿಕೊಳ್ಳದೆ ಅವಮಾನಿಸಿದ್ದ ಹಿನ್ನೆಲೆಯಲ್ಲಿ 1818 ಜನವರಿ 1 ರಂದು ಸ್ವಾಭಿಮಾನಕ್ಕಾಗಿ ನಡೆದ ಯುದ್ಧದಲ್ಲಿ ಮಹರ್ ರೆಜಿಮೆಂಟ್ ಸೈನ್ಯ ಪೇಶ್ವೆಯ 28 ಸಾವಿರ ಸೈನಿಕರನ್ನು ಕೇವಲ 500 ಮಹರ್ ಸೈನಿಕರು ಸೋಲಿಸಿದ್ದು ಇತಿಹಾಸವನ್ನು ಬಾಬಾಸಾಹೇಬರು ಹುಡುಕಿ ನಮಗೆ ತಿಳಿಸಿದ್ದಾರೆ’ ಎಂದರು.</p>.<p>ರುಕುಮ್ ಪಟೇಲ್ ಇಜೇರಿ, ಲಾಲಯ್ಯ ಗುತ್ತೇದಾರ, ಈರಣ್ಣ ಅವರಾದಿ, ಅಣ್ಣರಾಯ ಯಂಕಂಚಿ, ಅಮೀರ್ ಹಮಿಜ್ ಲಖನಾಪುರ, ಅಲ್ಲಪಟೇಲ್, ಈರಣ್ಣ ತಳವಾರ, ಪಿಡಿಒ ನಂದಕುಮಾರ್, ಕಾಲಿದಮಿಯಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>