‘ಸಂವಿಧಾನ ಒಪ್ಪದವರಿಗೆ ಇಲ್ಲೇನು ಕೆಲಸ?’
‘ಸಂವಿಧಾನ ಒಪ್ಪದವರು ಹೇಗೆ ದೇಶಭಕ್ತರಾಗುತ್ತಾರೆ’ ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದರು.
ಇಲ್ಲಿ ನಡೆದ ‘ಸಂವಿಧಾನ ಸಮಾವೇಶ’ ಉದ್ಘಾಟಿಸಿದ ಅವರು, ‘ದೇಶದಲ್ಲಿ ಸಂಸತ್ತಿಗಿಂತಲೂ ಸಂವಿಧಾನ ದೊಡ್ಡದು. ಸಂವಿಧಾನ ಒಪ್ಪದವರಿಗೆ ದೇಶದಲ್ಲಿ ಕೆಲಸವೇನಿದೆ’ ಎಂದು ಆರ್ಎಸ್ಎಸ್ ಹೆಸರು ಪ್ರಸ್ತಾಪಿಸದೇ ಪ್ರಶ್ನಿಸಿದರು.
‘ಸಂವಿಧಾನದ ಆಶಯ ಸಂಘರ್ಷವಲ್ಲ, ಸಾಮರಸ್ಯ. ಬಹುಸಂಖ್ಯಾತರಿಗೆ ಧರ್ಮವಲ್ಲ, ದೇಶ ಮುಖ್ಯ. ಧರ್ಮ, ಜಾತಿಯ ಹೆಸರಿನಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುವವರು ದೇಶಭಕ್ತರಲ್ಲ’ ಎಂದೂ ಟೀಕಿಸಿದರು.