<p><strong>ಚಿತ್ತಾಪುರ (ಕಲಬುರಗಿ ಜಿಲ್ಲೆ):</strong> ‘ಪಟ್ಟಣದಲ್ಲಿ ಇಂದು (ಡಿಸೆಂಬರ್ 1) ಆಯೋಜಿಸಿರುವ ‘ಭೀಮ ನಡಿಗೆ’ ಪಥ ಸಂಚಲನದಲ್ಲಿ ಚಿತ್ತಾಪುರ ತಾಲ್ಲೂಕಿನವರು ಮಾತ್ರ ಭಾಗವಹಿಸಬೇಕು’ ಎಂಬ ಷರತ್ತು ವಿಧಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ನ. 30ರಂದು ಅನುಮತಿ ನೀಡಿದ್ದಾರೆ.</p>.<p>ಸಾರ್ವಜನಿಕ ಸ್ಥಳಗಳು, ಬೀದಿಗಳಲ್ಲಿ ಭಾಷಣ, ಕಾರ್ಯಕ್ರಮ ಆಯೋಜಿಸಬಾರದು. ರಾಜಕೀಯ ಭಾಷಣ ಮಾಡಬಾರದು, ಪ್ರಚೋದನಕಾರಿ ಭಾಷೆ, ಘೋಷಣೆ ಬಳಸಬಾರದು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ತಹಶೀಲ್ದಾರ್ ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.</p>.<p>ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನದ ದಿನವೇ ತಮಗೂ ಭೀಮನಡಿಗೆ ನಡೆಸಲು ಅನುಮತಿ ನೀಡುವಂತೆ ಕೋರಿ ವಿವಿಧ ದಲಿತ ಸಂಘಟನೆಗಳು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದವು. ಆದರೆ, ಭೀಮ ನಡಿಗೆಗೆ ಬೇರೆ ದಿನ ಅವಕಾಶ ನೀಡಲು ಹೈಕೋರ್ಟ್ ಸೂಚಿಸಿತ್ತು. ಆರ್ಎಸ್ಎಸ್ ಪಥಸಂಚಲನ ನ.16ರಂದು ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ (ಕಲಬುರಗಿ ಜಿಲ್ಲೆ):</strong> ‘ಪಟ್ಟಣದಲ್ಲಿ ಇಂದು (ಡಿಸೆಂಬರ್ 1) ಆಯೋಜಿಸಿರುವ ‘ಭೀಮ ನಡಿಗೆ’ ಪಥ ಸಂಚಲನದಲ್ಲಿ ಚಿತ್ತಾಪುರ ತಾಲ್ಲೂಕಿನವರು ಮಾತ್ರ ಭಾಗವಹಿಸಬೇಕು’ ಎಂಬ ಷರತ್ತು ವಿಧಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ನ. 30ರಂದು ಅನುಮತಿ ನೀಡಿದ್ದಾರೆ.</p>.<p>ಸಾರ್ವಜನಿಕ ಸ್ಥಳಗಳು, ಬೀದಿಗಳಲ್ಲಿ ಭಾಷಣ, ಕಾರ್ಯಕ್ರಮ ಆಯೋಜಿಸಬಾರದು. ರಾಜಕೀಯ ಭಾಷಣ ಮಾಡಬಾರದು, ಪ್ರಚೋದನಕಾರಿ ಭಾಷೆ, ಘೋಷಣೆ ಬಳಸಬಾರದು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ತಹಶೀಲ್ದಾರ್ ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.</p>.<p>ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನದ ದಿನವೇ ತಮಗೂ ಭೀಮನಡಿಗೆ ನಡೆಸಲು ಅನುಮತಿ ನೀಡುವಂತೆ ಕೋರಿ ವಿವಿಧ ದಲಿತ ಸಂಘಟನೆಗಳು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದವು. ಆದರೆ, ಭೀಮ ನಡಿಗೆಗೆ ಬೇರೆ ದಿನ ಅವಕಾಶ ನೀಡಲು ಹೈಕೋರ್ಟ್ ಸೂಚಿಸಿತ್ತು. ಆರ್ಎಸ್ಎಸ್ ಪಥಸಂಚಲನ ನ.16ರಂದು ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>