ಸೋಮವಾರ ಸಂಜೆ ‘ಪ್ರಜಾವಾಣಿ‘ಯೊಂದಿಗೆ ಮಾತನಾಡಿದ ಅವರು, ‘ಬರಿದಾಗಿರುವ ಭೀಮಾ ನದಿಗೆ ನಾರಾಯಣಪುರ ಜಲಾಶಯದ ಐಬಿಸಿ ಮೂಲಕ 1.5 ಟಿಎಂಸಿ ನೀರು ಹರಿಸಿ ಜನ, ಜಾನುವಾರುಗಳ ಜೀವ ಉಳಿಸಬೇಕು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ನಾನು ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದೇವೆ. ಆದರೆ ಉಪಮುಖ್ಯಮಂತ್ರಿಗಳು 1 ಟಿಎಂಸಿ ನೀರು ಹರಿಸುವುದಾಗಿ ತಿಳಿಸಿದ್ದಾರೆ. ಮಂಗಳವಾರ ಸರ್ಕಾರದಿಂದ ಆದೇಶವಾಗುತ್ತದೆ’ ಎಂದು ತಿಳಿಸಿದರು.