ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.26 ಮತ್ತು 27ರಂದು ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆಯಲಿರುವ 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ನಿಮಿತ್ತ ಭಾನುವಾರ ಬೈಕ್ ಜಾಥಾ ನಡೆಯಿತು.
ಕನ್ನಡ ಭವನದ ಆವರಣದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಬೈಕ್ ಜಾಥಾಗೆ ಚಾಲನೆ ನೀಡಿ ಸಮ್ಮೇಳನಕ್ಕೆ ಶುಭ ಕೋರಿದರು.
ಕನ್ನಡ ಭವನದಿಂದ ಜಗತ್ ವೃತ್ತ, ಸೂಪರ್ ಮಾರುಕಟ್ಟೆ, ಲಾಲಗೇರಿ ಕ್ರಾಸ್, ಶರಣಬಸವೇಶ್ವರ ದೇವಸ್ಥಾನ, ಗೋವಾ ಹೋಟೆಲ್, ಆನಂದ ಹೋಟೇಲ್ ಹಾಗೂ ಸರದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಚಲಿಸಿ ಸಮ್ಮೇಳನ ಯಶಸ್ವಿಗೆ ಸಾರ್ಎವಜನಿಕರ ಸಹಕಾರ ಕೋರಿದರು.
ಕಸಾಪ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಯಶ್ವಂತರಾಯ ಅಷ್ಟಗಿ, ಪದಾಧಿಕಾರಿಗಳಾದ ಧರ್ಮಣ್ಣ ಧನ್ನಿ, ಕಲ್ಯಾಣಕುಮಾರ ಶೀಲವಂತ, ರಾಜೇಂದ್ರ ಮಾಡಬೂಳ ಸೇರಿದಂತೆ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು.