ಏಪ್ರಿಲ್ 29ರ ಮಧ್ಯಾಹ್ನ 3ಕ್ಕೆ ಚಿತ್ತಾಪುರದಲ್ಲಿ ನಡೆಯುವ ಯುವ ಸಮಾವೇಶದಲ್ಲಿ ಮಾಜಿ ಸಚಿವ ಸಿ.ಟಿ. ರವಿ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಪಾಲ್ಗೊಳ್ಳುವರು. ಸಮಾವೇಶದ ನಂತರ ನಗರದ ಗೋವಾ ಹೋಟೆಲ್ ಸಮೀಪದ ಬಸವರಾಜಪ್ಪ ಅಪ್ಪ ಸ್ಮರಣಾರ್ಥ ಭವನದಲ್ಲಿ ಸಂಜೆ 6.30ಕ್ಕೆ ಪ್ರಚಾರ ಸಭೆ ನಡೆಸುವರು. ನಗರದಲ್ಲಿ ವಾಸ್ತವ್ಯ ಮಾಡಿ ಏ.30ರಂದು ಪಕ್ಷದ ಪ್ರಮುಖರ ಸಭೆ ನಡೆಸಿ, ಚುನಾವಣಾ ಪ್ರಚಾರದ ಬಗ್ಗೆಯೂ ಚರ್ಚಿಸುವರು ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.