‘ಜೆಡಿಎಸ್ ಪಕ್ಷದ ಒಗ್ಗಟ್ಟಿನೊಂದಿಗೆ ಚುನಾವಣೆ ಮಾಡಲಾಗುವುದು. ಬಿಜೆಪಿ–ಜೆಡಿಎಸ್ ಮೈತ್ರಿಯಾಗಿರುವುದರಿಂದ ನಮಗೆ ಅನುಕೂಲವಾಗಲಿದೆ. ಇದರಿಂದ ನಾವು ಜಯ ಸಾಧಿಸಲಿದ್ದೇವೆ. ಈಶಾನ್ಯ ಪದವೀಧರ ಕ್ಷೇತ್ರ 7 ಜಿಲ್ಲೆಗಳ 41 ವಿಧಾನಸಭೆ ವ್ಯಾಪ್ತಿ ಹೊಂದಿದೆ. ಚುನಾವಣೆಗೆ ಕಡಿಮೆ ಸಮಯ ಇರುವುದರಿಂದ ಆ ಅವಧಿಯಲ್ಲಿಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ, ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಪ್ರಚಾರಕ್ಕೆ ಬರಲಿದ್ದಾರೆ’ ಎಂದು ಹೇಳಿದರು.