ಕೆಪಿಸಿಸಿಯ ನಿಲುವಿನಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೀಸಲಾತಿಯನ್ನು ಈ ಹಿಂದಿನ ಯಥಾಸ್ಥಿತಿಯಲ್ಲಿ ಕಾಪಾಡಲಿದೆ. ಮುಸ್ಲಿಮರು, ಎಸ್ಸಿ, ಎಸ್ಟಿ, ಲಿಂಗಾಯಿತ, ಒಕ್ಕಲಿಗರು ಸೇರಿದಂತೆ ಎಲ್ಲರ ಹಿತ ಕಾಯಲಿದೆ. ಚುನಾವಣೆ ವೇಳೆ ಜನರ ದಾರಿ ತಪ್ಪಿಸಲು ಹಾಗೂ ತನ್ನ ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ಬೇಕಾಬಿಟ್ಟಿಯಾಗಿ ಹೊಂದಿಸುವ ಮೂಲಕ ರಾಜ್ಯ ಸರ್ಕಾರ ಜನದ್ರೋಹಿ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.