<p><strong>ಜೇವರ್ಗಿ</strong>: ಪಕ್ಷದ ವಿಪ್ ಉಲ್ಲಂಘಿಸಿದ ಜೇವರ್ಗಿ ಪುರಸಭೆಯ 9 ಜನ ಬಿಜೆಪಿ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.</p>.<p>ಫೆ.12ರಂದು ಜೇವರ್ಗಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಸಂದರ್ಭದಲ್ಲಿ ವಿಪ್ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ.</p>.<p>ಸದಸ್ಯರಾದ ಸಂಗಣಗೌಡ ರದ್ದೇವಾಡಗಿ, ಗುರುಶಾಂತಯ್ಯ ಹಿರೇಮಠ, ಕಸ್ತೂರುಬಾಯಿ ಸಾಹೇಬಗೌಡ ಕಲ್ಲಾ, ಮಲ್ಲಿಕಾರ್ಜುನ ಭಜಂತ್ರಿ, ಗಂಗೂಬಾಯಿ ಜಟ್ಟಿಂಗರಾಯ, ಸಿದ್ದರಾಮ ಯಳಸಂಗಿ, ಗುರುಲಿಂಗಪ್ಪಗೌಡ ಮಾಲಿಪಾಟೀಲ, ಶರಣಮ್ಮ ತಳವಾರ, ಚಂದ್ರಕಾಂತ ಮಹೇಂದ್ರಕರ್ ಅನರ್ಹಗೊಂಡವರು.</p>.<p>ಪುರಸಭೆ ಸದಸ್ಯರ ಅಧಿಕಾರ ಅವಧಿ ನವೆಂಬರ್ 6ಕ್ಕೆ ಕೊನೆಗೊಂಡಿದೆ. ಇದಕ್ಕೂ ಮುನ್ನವೇ, ಅಂದರೆ ನವೆಂಬರ್ 3ರಂದು ಜಿಲ್ಲಾಧಿಕಾರಿ ಸದಸ್ಯರನ್ನು ಅನರ್ಹಗೊಳಿಸಿದ್ದಾರೆ. 7ರಂದು ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.</p>.<p>ಈ 9 ಜನ ಸದಸ್ಯರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್ಗೆ ಮತ ಚಲಾಯಿಸಿದ್ದರು ಎಂದು ಆರೋಪಿಸಿ ಬಿಜೆಪಿ ಜಿಲ್ಲಾಧಿಕಾರಿಗೆ ದೂರು ನೀಡಿತ್ತು. ಸುದೀರ್ಘ ವಿಚಾರಣೆ ಬಳಿಕ ಈಗ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ</strong>: ಪಕ್ಷದ ವಿಪ್ ಉಲ್ಲಂಘಿಸಿದ ಜೇವರ್ಗಿ ಪುರಸಭೆಯ 9 ಜನ ಬಿಜೆಪಿ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.</p>.<p>ಫೆ.12ರಂದು ಜೇವರ್ಗಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಸಂದರ್ಭದಲ್ಲಿ ವಿಪ್ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ.</p>.<p>ಸದಸ್ಯರಾದ ಸಂಗಣಗೌಡ ರದ್ದೇವಾಡಗಿ, ಗುರುಶಾಂತಯ್ಯ ಹಿರೇಮಠ, ಕಸ್ತೂರುಬಾಯಿ ಸಾಹೇಬಗೌಡ ಕಲ್ಲಾ, ಮಲ್ಲಿಕಾರ್ಜುನ ಭಜಂತ್ರಿ, ಗಂಗೂಬಾಯಿ ಜಟ್ಟಿಂಗರಾಯ, ಸಿದ್ದರಾಮ ಯಳಸಂಗಿ, ಗುರುಲಿಂಗಪ್ಪಗೌಡ ಮಾಲಿಪಾಟೀಲ, ಶರಣಮ್ಮ ತಳವಾರ, ಚಂದ್ರಕಾಂತ ಮಹೇಂದ್ರಕರ್ ಅನರ್ಹಗೊಂಡವರು.</p>.<p>ಪುರಸಭೆ ಸದಸ್ಯರ ಅಧಿಕಾರ ಅವಧಿ ನವೆಂಬರ್ 6ಕ್ಕೆ ಕೊನೆಗೊಂಡಿದೆ. ಇದಕ್ಕೂ ಮುನ್ನವೇ, ಅಂದರೆ ನವೆಂಬರ್ 3ರಂದು ಜಿಲ್ಲಾಧಿಕಾರಿ ಸದಸ್ಯರನ್ನು ಅನರ್ಹಗೊಳಿಸಿದ್ದಾರೆ. 7ರಂದು ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.</p>.<p>ಈ 9 ಜನ ಸದಸ್ಯರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್ಗೆ ಮತ ಚಲಾಯಿಸಿದ್ದರು ಎಂದು ಆರೋಪಿಸಿ ಬಿಜೆಪಿ ಜಿಲ್ಲಾಧಿಕಾರಿಗೆ ದೂರು ನೀಡಿತ್ತು. ಸುದೀರ್ಘ ವಿಚಾರಣೆ ಬಳಿಕ ಈಗ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>