<p><strong>ಕಲಬುರಗಿ</strong>: ‘ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ತೆಗೆಯುವ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇವೆ’ ಎಂದು ಬಿಜೆಪಿ ಒಬಿಸಿ ಮೋರ್ಚಾ ಸದಸ್ಯತ್ವ ಜಿಲ್ಲಾ ಸಂಚಾಲಕ ಬಸವರಾಜ ಮದ್ರಿಕಿ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ರಾಹುಲ್ ಅವರ ಹೇಳಿಕೆಯನ್ನು ಬಿಜೆಪಿ ಒಬಿಸಿ ಮೋರ್ಚಾ ಖಂಡಿಸುತ್ತದೆ. ಕಾಂಗ್ರೆಸ್ನ ದಲಿತ ವಿರೋಧಿ ನಿಲುವು ಮತ್ತೊಮ್ಮೆ ಬಹಿರಂಗಗೊಂಡಿದೆ’ ಎಂದರು.</p>.<p>‘ದೇಶದಲ್ಲಿ ಸೆ.2ರಿಂದ ಆರಂಭವಾಗಿರುವ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಭಾಗವಾಗಿ ಪ್ರತಿ ಬೂತಮಟ್ಟದಲ್ಲಿ 400 ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ. ಪ್ರತಿ ವಿಧಾನಸಭೆಗೆ ಹತ್ತು ಸಾವಿರ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ’ ಎಂದು </p>.<p>‘ಬಿಜೆಪಿಗೆ ಕಾರ್ಯಕರ್ತರೇ ಬುನಾದಿ. ಕಾರ್ಯಕರ್ತರ ಆಧಾರಿತ ಪಕ್ಷ. ಪತ್ರಿ ಆರು ವರ್ಷಗಳಿಗೊಮ್ಮೆ ಸದಸ್ಯತ್ವ ಅಭಿಯಾನ ನಡೆಸಲಾಗುತ್ತದೆ. ನಿಗದಿತ ದೂರವಾಣಿಗೆ ಮಿಸ್ ಕಾಲ್ ನೀಡುವ ಮೂಲಕ ಸದಸ್ಯತ್ವ ಪಡೆಯಬಹುದು’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸೂರ್ಯಕಾಂತ ಅವರಾದ(ಬಿ), ದೇವೀಂದ್ರ ದೇಸಾಯಿ ಕಲ್ಲೂರ, ಬಿ.ಜಯಸಿಂಗ, ರಾಜಶೇಖರ ಮುಚಖೇಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ತೆಗೆಯುವ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇವೆ’ ಎಂದು ಬಿಜೆಪಿ ಒಬಿಸಿ ಮೋರ್ಚಾ ಸದಸ್ಯತ್ವ ಜಿಲ್ಲಾ ಸಂಚಾಲಕ ಬಸವರಾಜ ಮದ್ರಿಕಿ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ರಾಹುಲ್ ಅವರ ಹೇಳಿಕೆಯನ್ನು ಬಿಜೆಪಿ ಒಬಿಸಿ ಮೋರ್ಚಾ ಖಂಡಿಸುತ್ತದೆ. ಕಾಂಗ್ರೆಸ್ನ ದಲಿತ ವಿರೋಧಿ ನಿಲುವು ಮತ್ತೊಮ್ಮೆ ಬಹಿರಂಗಗೊಂಡಿದೆ’ ಎಂದರು.</p>.<p>‘ದೇಶದಲ್ಲಿ ಸೆ.2ರಿಂದ ಆರಂಭವಾಗಿರುವ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಭಾಗವಾಗಿ ಪ್ರತಿ ಬೂತಮಟ್ಟದಲ್ಲಿ 400 ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ. ಪ್ರತಿ ವಿಧಾನಸಭೆಗೆ ಹತ್ತು ಸಾವಿರ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ’ ಎಂದು </p>.<p>‘ಬಿಜೆಪಿಗೆ ಕಾರ್ಯಕರ್ತರೇ ಬುನಾದಿ. ಕಾರ್ಯಕರ್ತರ ಆಧಾರಿತ ಪಕ್ಷ. ಪತ್ರಿ ಆರು ವರ್ಷಗಳಿಗೊಮ್ಮೆ ಸದಸ್ಯತ್ವ ಅಭಿಯಾನ ನಡೆಸಲಾಗುತ್ತದೆ. ನಿಗದಿತ ದೂರವಾಣಿಗೆ ಮಿಸ್ ಕಾಲ್ ನೀಡುವ ಮೂಲಕ ಸದಸ್ಯತ್ವ ಪಡೆಯಬಹುದು’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸೂರ್ಯಕಾಂತ ಅವರಾದ(ಬಿ), ದೇವೀಂದ್ರ ದೇಸಾಯಿ ಕಲ್ಲೂರ, ಬಿ.ಜಯಸಿಂಗ, ರಾಜಶೇಖರ ಮುಚಖೇಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>