‘ಪಕ್ಷ ಕೊಟ್ಟ ಕೆಲಸವನ್ನು ಜವಾಬ್ದಾರಿಯುತವಾಗಿ ಮಾಡುತ್ತೇನೆ. ನಮ್ಮ ತಂದೆ ನನ್ನನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವಂತೆ ಯಾವತ್ತು ಒತ್ತಡ ಹಾಕಿಲ್ಲ, ಹಾಕುವುದೂ ಇಲ್ಲ. ಯಡಿಯೂರಪ್ಪ ಅವರ ಮಗನ ಹಣೆಯ ಬರಹದಲ್ಲಿ ಏನು ಬರೆದಿದೆಯೋ ಅದನ್ನು ಯಾರು ತಪ್ಪಿಸುವುದಕ್ಕೆ ಆಗುವುದಿಲ್ಲ’ ಎಂದು ಚುನಾವಣೆ ಸ್ಪರ್ಧೆಯ ಪ್ರಶ್ನೆಗೆ ಉತ್ತರಿಸಿದರು. ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ, ಬಿಜೆಪಿ ಮುಖಂಡರಾದ ಶಿವಕಾಂತ ಮಹಾಜನ್, ಅರುಣಕುಮಾರ ಪಾಟೀಲ ಇದ್ದರು.