ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿಯಲ್ಲಿ ಬಿಜೆಪಿ ಮುಖಂಡ ಮಹಾಂತಪ್ಪ ಕೊಲೆ

Published 29 ಫೆಬ್ರುವರಿ 2024, 8:25 IST
Last Updated 29 ಫೆಬ್ರುವರಿ 2024, 8:25 IST
ಅಕ್ಷರ ಗಾತ್ರ

ಆಳಂದ (ಕಲಬುರಗಿ ಜಿಲ್ಲೆ)‌: ತಾಲ್ಲೂಕಿನ ಸರಸಂಬಾ ಗ್ರಾಮದ ಬಿಜೆಪಿ ಮುಖಂಡ ಮಹಾಂತಪ್ಪ ‌ಸಿದ್ದರಾಮಪ್ಪ ಆಲೂರೆ (45) ಅವರನ್ನು ಗುರುವಾರ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸರಸಂಬಾ ಗ್ರಾಮದಲ್ಲಿ ಧನಲಕ್ಷ್ಮಿ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಮಹಾಂತಪ್ಪ, ಸತತ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.

ಮಹಾಂತಪ್ಪ, ಬೆಳಿಗ್ಗೆ ಹೊಲದಲ್ಲಿ ಕಟ್ಟಿಹಾಕಿದ್ದ ಆಕಳಿನ ಹಾಲು ತೆಗೆದುಕೊಂಡು ಮನೆಯತ್ತ ಬರುತ್ತಿದ್ದರು. ಗ್ರಾಮದ ಮುಖ್ಯರಸ್ತೆಯ ಜೆಸ್ಕಾಂ ಕಚೇರಿ ಸಮೀಪ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಮಹಾಂತಪ್ಪ ಅವರನ್ನು ಅಡ್ಡಗಟ್ಟಿದರು. ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತಪ್ಪ ಅವರನ್ನು ಸೋಲಾಪುರ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಾದನ ಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT