<p><strong>ಸೇಡಂ:</strong> ‘ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ’ ಎಂದು ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ತಾಪಾಡಿಯಾ ಭವನದಲ್ಲಿ ಹಲವು ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಈಗ ಜನ ಬಿಜೆಪಿ ದುರಾಡಳಿತದ ವಿರುದ್ಧ ರೋಸಿ ಹೋಗಿದ್ದು, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ತತ್ವಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಅತ್ಯಂತ ಸಂತಸ ತಂದಿದೆ’ ಎಂದರು.</p>.<p>‘ಏಳು ದಶಕಗಳಿಂದ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಧಾನಿ ಅವರು ಕೇಳುತ್ತಾರೆ. ಆದರೆ, ಒಬ್ಬ ಚಹಾ ಮಾರುತ್ತಿದ್ದ ವ್ಯಕ್ತಿ ಕೂಡ ದೇಶದ ಪ್ರಧಾನಮಂತ್ರಿಯಾಗುವ ವ್ಯವಸ್ಥೆ ನಿರ್ಮಿಸಿದ್ದು ಕಾಂಗ್ರೆಸ್ ಪಕ್ಷ’ ಎಂದರು.</p>.<p>ಸೇಡಂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ ಮಾತನಾಡಿದರು.</p>.<p>ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಇಟಕಾಲ್, ವೆಂಕಟರಾಮರೆಡ್ಡಿ ಕಡತಾಲ್, ಹೇಮಾರೆಡ್ಡಿ ಪಾಟೀಲ, ಅಬ್ದುಲ್ ಗಫೂರ, ಸತೀಶರೆಡ್ಡಿ ರಂಜೋಳ, ರಾಹುಲ್, ವಿಶ್ವನಾಥ ಪಾಟೀಲ ಬೊಮ್ಮನಳ್ಳಿ, ಅನಂತಯ್ಯ ಮುಸ್ತಾಜರ್, ಸಂತೋಷ ಕುಲಕರ್ಣಿ ಇದ್ದರು.</p>.<p class="Subhead">ಯುವಕರು ಕಾಂಗ್ರೆಸ್ ಸೇರ್ಪಡೆ: ತೆರೆದ ವಾಹನದಲ್ಲಿ ಪಟ್ಟಣದ ಕೊತ್ತಲ ಬಸವೇಶ್ವರ ದೇವಾಲಯದಿಂದ ಆರಂಭಗೊಂಡ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಸೇರಿದಂತೆ ಪಕ್ಷದ ಮುಖಂಡರ ಮೆರವಣಿಗೆ ಚೌರಸ್ತಾ, ಕಿರಾಣ ಬಜಾರ್ ಮೂಲಕ, ತಾಪಾಡಿಯಾ ಭವನ ತಲುಪಿತು.</p>.<p>ಮೆರವಣಿಯುದ್ದಕ್ಕೂ ಕಾರ್ಯ ಕರ್ತರು ಸಂಭ್ರಮಿಸಿದರು. ಎರಡು ಜೆಸಿಬಿಗಳ ಮೇಲೆ ನಿಂತು, ದೊಡ್ಡ ಹಾರವನ್ನು ಮಾಜಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರಿಗೆ ಹಾಕಿದರು.</p>.<p>ಭೀಮಾಶಂಕರ ಕೊಳ್ಳಿ, ಶಿವಕುಮಾರ ಜೀವಣಗಿ, ಅಭಿಷೇಕ ಬಾಗೋಡಿ, ಜಗದೀಶ ಕಲಶೆಟ್ಟಿ, ಸೇರಿದಂತೆ 100ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ:</strong> ‘ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ’ ಎಂದು ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ತಾಪಾಡಿಯಾ ಭವನದಲ್ಲಿ ಹಲವು ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಈಗ ಜನ ಬಿಜೆಪಿ ದುರಾಡಳಿತದ ವಿರುದ್ಧ ರೋಸಿ ಹೋಗಿದ್ದು, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ತತ್ವಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಅತ್ಯಂತ ಸಂತಸ ತಂದಿದೆ’ ಎಂದರು.</p>.<p>‘ಏಳು ದಶಕಗಳಿಂದ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಧಾನಿ ಅವರು ಕೇಳುತ್ತಾರೆ. ಆದರೆ, ಒಬ್ಬ ಚಹಾ ಮಾರುತ್ತಿದ್ದ ವ್ಯಕ್ತಿ ಕೂಡ ದೇಶದ ಪ್ರಧಾನಮಂತ್ರಿಯಾಗುವ ವ್ಯವಸ್ಥೆ ನಿರ್ಮಿಸಿದ್ದು ಕಾಂಗ್ರೆಸ್ ಪಕ್ಷ’ ಎಂದರು.</p>.<p>ಸೇಡಂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ ಮಾತನಾಡಿದರು.</p>.<p>ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಇಟಕಾಲ್, ವೆಂಕಟರಾಮರೆಡ್ಡಿ ಕಡತಾಲ್, ಹೇಮಾರೆಡ್ಡಿ ಪಾಟೀಲ, ಅಬ್ದುಲ್ ಗಫೂರ, ಸತೀಶರೆಡ್ಡಿ ರಂಜೋಳ, ರಾಹುಲ್, ವಿಶ್ವನಾಥ ಪಾಟೀಲ ಬೊಮ್ಮನಳ್ಳಿ, ಅನಂತಯ್ಯ ಮುಸ್ತಾಜರ್, ಸಂತೋಷ ಕುಲಕರ್ಣಿ ಇದ್ದರು.</p>.<p class="Subhead">ಯುವಕರು ಕಾಂಗ್ರೆಸ್ ಸೇರ್ಪಡೆ: ತೆರೆದ ವಾಹನದಲ್ಲಿ ಪಟ್ಟಣದ ಕೊತ್ತಲ ಬಸವೇಶ್ವರ ದೇವಾಲಯದಿಂದ ಆರಂಭಗೊಂಡ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಸೇರಿದಂತೆ ಪಕ್ಷದ ಮುಖಂಡರ ಮೆರವಣಿಗೆ ಚೌರಸ್ತಾ, ಕಿರಾಣ ಬಜಾರ್ ಮೂಲಕ, ತಾಪಾಡಿಯಾ ಭವನ ತಲುಪಿತು.</p>.<p>ಮೆರವಣಿಯುದ್ದಕ್ಕೂ ಕಾರ್ಯ ಕರ್ತರು ಸಂಭ್ರಮಿಸಿದರು. ಎರಡು ಜೆಸಿಬಿಗಳ ಮೇಲೆ ನಿಂತು, ದೊಡ್ಡ ಹಾರವನ್ನು ಮಾಜಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರಿಗೆ ಹಾಕಿದರು.</p>.<p>ಭೀಮಾಶಂಕರ ಕೊಳ್ಳಿ, ಶಿವಕುಮಾರ ಜೀವಣಗಿ, ಅಭಿಷೇಕ ಬಾಗೋಡಿ, ಜಗದೀಶ ಕಲಶೆಟ್ಟಿ, ಸೇರಿದಂತೆ 100ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>