<p><strong>ಕಲಬುರಗಿ:</strong> ‘ಬಿಜೆಪಿಯವರು ತಮ್ಮ ಕಚೇರಿಗಳನ್ನು ಕಟ್ಟಿಸಲು ₹300 ಕೋಟಿಯಿಂದ ₹400 ಕೋಟಿ ಖರ್ಚು ಮಾಡುತ್ತಿದ್ದಾರೆ. ಅಷ್ಟೊಂದು ಹಣ ಎಲ್ಲಿಂದ ಬಂತು? ಅವರ ಪಕ್ಷಕ್ಕೆ ಹೆಚ್ಚು ದೇಣಿಗೆ ಸಂಗ್ರಹವಾಗುತ್ತಿರುವುದು ಹೇಗೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲು ಐಟಿ, ಇಡಿಯನ್ನು ಅವರ ಕಚೇರಿಗೇ ಕಳಿಸುತ್ತೇವೆ’ ಎಂದೂ ಅವರು ಹೇಳಿದರು.</p>.<p>‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಆರ್ಎಸ್ಎಸ್ ಮೇಲೆ ನಿಷೇಧ ಹೇರಿದ್ದರು. ಅದನ್ನು ನಂತರ ಬಂದ ಸರ್ಕಾರ ವಾಪಸ್ ತೆಗೆದುಕೊಂಡು ತಪ್ಪು ಮಾಡಿದೆ ಎನಿಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ ನಿಷೇಧಿಸಲಿದೆ’ ಎಂದ ಅವರು, ‘ಬಿಜೆಪಿಯು ಆರ್ಎಸ್ಎಸ್ನ ಚೇಲಾ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಮುಖಂಡರು ವಿಧಾನಸಭೆಯಲ್ಲಿ ಕುಳಿತಿದ್ದಾರೆ. ಬಿಜೆಪಿ ಎಂದಿಗೂ ಸಾಮಾಜಿಕ ಸಮಾನತೆ, ಜಾತ್ಯತೀತ ಮೌಲ್ಯಗಳನ್ನು ಒಪ್ಪಿಲ್ಲ. ಅದಕ್ಕಾಗಿಯೇ ಸಂವಿಧಾನದಲ್ಲಿನ ಜಾತ್ಯತೀತ, ಸಮಾಜವಾದಿ ಪದಗಳನ್ನು ತೆಗೆಯುವಂತೆ ಬೇಡಿಕೆ ಇಟ್ಟಿದೆ. ಆದರೆ, ಬಿಜೆಪಿಯ ಸಂವಿಧಾನದಲ್ಲಿಯೇ ಈ ಅಂಶಗಳಿವೆ ಎಂಬುದನ್ನು ಆ ಪಕ್ಷದ ನಾಯಕರು ಮರೆತಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಬಿಜೆಪಿಯವರು ತಮ್ಮ ಕಚೇರಿಗಳನ್ನು ಕಟ್ಟಿಸಲು ₹300 ಕೋಟಿಯಿಂದ ₹400 ಕೋಟಿ ಖರ್ಚು ಮಾಡುತ್ತಿದ್ದಾರೆ. ಅಷ್ಟೊಂದು ಹಣ ಎಲ್ಲಿಂದ ಬಂತು? ಅವರ ಪಕ್ಷಕ್ಕೆ ಹೆಚ್ಚು ದೇಣಿಗೆ ಸಂಗ್ರಹವಾಗುತ್ತಿರುವುದು ಹೇಗೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲು ಐಟಿ, ಇಡಿಯನ್ನು ಅವರ ಕಚೇರಿಗೇ ಕಳಿಸುತ್ತೇವೆ’ ಎಂದೂ ಅವರು ಹೇಳಿದರು.</p>.<p>‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಆರ್ಎಸ್ಎಸ್ ಮೇಲೆ ನಿಷೇಧ ಹೇರಿದ್ದರು. ಅದನ್ನು ನಂತರ ಬಂದ ಸರ್ಕಾರ ವಾಪಸ್ ತೆಗೆದುಕೊಂಡು ತಪ್ಪು ಮಾಡಿದೆ ಎನಿಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ ನಿಷೇಧಿಸಲಿದೆ’ ಎಂದ ಅವರು, ‘ಬಿಜೆಪಿಯು ಆರ್ಎಸ್ಎಸ್ನ ಚೇಲಾ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಮುಖಂಡರು ವಿಧಾನಸಭೆಯಲ್ಲಿ ಕುಳಿತಿದ್ದಾರೆ. ಬಿಜೆಪಿ ಎಂದಿಗೂ ಸಾಮಾಜಿಕ ಸಮಾನತೆ, ಜಾತ್ಯತೀತ ಮೌಲ್ಯಗಳನ್ನು ಒಪ್ಪಿಲ್ಲ. ಅದಕ್ಕಾಗಿಯೇ ಸಂವಿಧಾನದಲ್ಲಿನ ಜಾತ್ಯತೀತ, ಸಮಾಜವಾದಿ ಪದಗಳನ್ನು ತೆಗೆಯುವಂತೆ ಬೇಡಿಕೆ ಇಟ್ಟಿದೆ. ಆದರೆ, ಬಿಜೆಪಿಯ ಸಂವಿಧಾನದಲ್ಲಿಯೇ ಈ ಅಂಶಗಳಿವೆ ಎಂಬುದನ್ನು ಆ ಪಕ್ಷದ ನಾಯಕರು ಮರೆತಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>