ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ನಿಲುವುಗಳನ್ನು ಪ್ರಶ್ನಿಸಿದ್ದಕ್ಕಾಗಿ ನನ್ನನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ಆದರೆ, ಇದುವರೆಗೆ ನನಗೆ ಈ ಸಂಬಂಧ ಯಾವುದೇ ನೋಟಿಸ್ ಬಂದಿಲ್ಲ. ಉಚ್ಚಾಟನೆ ಮಾಡಿದ ಪತ್ರವೂ ಬಂದಿಲ್ಲ. ಈಗಲೂ ನನ್ನ ಮಾತುಗಳಿಗೆ ಬದ್ಧವಾಗಿದ್ದೇನೆ. ಪಕ್ಷದ ಒಳಗಡೆ ನಡೆಯುವ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತೇನೆ. ಬಿಜೆಪಿಗೆ ತನ್ನದೇ ಆದ ಸಂವಿಧಾನವಿದೆ. ಈ ಸಂವಿಧಾನದ ಪ್ರಕಾರ ನನಗೆ ನೋಟಿಸ್ ಕೊಡಬೇಕು. ನನ್ನ ಉತ್ತರ ನೋಡಿಕೊಂಡು ಜಿಲ್ಲಾ ಘಟಕದ ಅಧ್ಯಕ್ಷರು ನನ್ನನ್ನು ಹುದ್ದೆಯಿಂದ ಉಚ್ಚಾಟಿಸುವ ಆದೇಶವನ್ನು ಲಿಖಿತ ರೂಪದಲ್ಲಿ ಹೊರಡಿಸಬಹುದು. ಈ ನಿಯಮಗಳು ಪಾಲನೆಯಾಗಿಲ್ಲ’ ಎಂದರು.