ಕಲಬುರ್ಗಿ: ‘ಎಲ್ಲರೂ ಒಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ ಡಾ. ಉಮೇಶ ಜಾಧವ ಅವರನ್ನು ಗೆಲ್ಲಿಸಿಕೊಂಡು ಬಂದಿದ್ದೇವೆ. ರಸ್ತೆ, ಕೋವಿಡ್ ಪರಿಹಾರ ಕಿಟ್, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೇಳಿಕೊಳ್ಳಲೆಂದು ಹೋದರೆ ಸಂಸದರು ಮನೆಯಲ್ಲೇ ಇರುವುದಿಲ್ಲ. ಫೋನ್ ಕರೆ ಮಾಡಿದರೂ ಸಿಗುತ್ತಿಲ್ಲ’ ಎಂದುಬಿ.ಎಸ್. ಯಡಿಯೂರಪ್ಪ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷರೂ ಆದ ಸ್ಥಳೀಯ ಬಿಜೆಪಿ ಮುಖಂಡ ಬಾಬುರಾವ್ ಬಸವಂತವಾಡಿ ಆರೋಪಿಸಿದರು.