ಪ್ರಶ್ನೆ ಮಾಡಿದ್ದಕ್ಕೆ ಸಿಬಿಐ ದಾಳಿ: ‘ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳನ್ನು ಪ್ರಶ್ನೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಮನೆ, ಕಚೇರಿಗಳ ಮೇಲಿ ಸಿಬಿಐ ದಾಳಿ ನಡೆಸಿದೆ. ಚಿದಂಬರಂ ಅವರು ವಕೀಲರೂ, ಅರ್ಥಶಾಸ್ತ್ರಜ್ಞರೂ ಆಗಿದ್ದಾರೆ. ಈ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಾರೆ. ಬಿಜೆಪಿ ತಾನು ನಂಬಿದ ಮನುವಾದಿ ಸಿದ್ಧಾಂತದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದವರನ್ನು ಗುರಿಯಾಗಿಸಿ ಇಂತಹ ದಾಳಿಗಳನ್ನು ಮಾಡುತ್ತದೆ. ಒಟ್ಟಾರೆ ದೇಶದಲ್ಲಿ ಬಿಜೆಪಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ’ ಎಂದು ಖರ್ಗೆ ಅವರು ಆರೋಪಿಸಿದರು.