ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ; ಸಿದ್ಧರಾಮಯ್ಯಗೆ ವಿಜಯೇಂದ್ರ ತಿರುಗೇಟು

Last Updated 13 ನವೆಂಬರ್ 2020, 6:01 IST
ಅಕ್ಷರ ಗಾತ್ರ

ಕಲಬುರ್ಗಿ: ಇತ್ತೀಚೆಗೆ ನಡೆದ ಶಿರಾ, ರಾಜರಾಜೇಶ್ವರಿ ‌ಕ್ಷೇತ್ರದ ಉಪಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ. ಆಮಿಷವೊಡ್ಡಿದರೆ ಮತದಾರ ಬೆಂಬಲಿಸಲ್ಲ ಎಂಬುದನ್ನು ಸಿದ್ದರಾಮಯ್ಯ ಅರ್ಥಮಾಡಿಕೊಳ್ಳಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದರು.

ಶಿರಾದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವೈಫಲ್ಯಗಳನ್ನು ಎತ್ತಿ ತೋರಿಸಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದ್ದೇವೆ. ಎಲ್ಲಿಯೂ ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ. ಸೋಲಿನ ಹತಾಶೆಯಿಂದ ಸಿದ್ಧರಾಮಯ್ಯ ಹೀಗೆ ಮಾತಾಡುತ್ತಿದ್ದಾರೆ ಎಂದರು.

ಹಿಂದೆ 15 ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಿತ್ತು. 15ರಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಮೊನ್ನೆ ನಡೆದ ಚುನಾವಣೆಯಲ್ಲಿ 2 ಕ್ಷೇತಗಳಲ್ಲಿ ಶಿರಾ ಕ್ಷೇತ್ರ ಗೆಲ್ಲುವುದು ದೊಡ್ಡ ಸವಾಲಾಗಿತ್ತು. ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುತ್ತಿವೆ. ಆದರೆ, ಬಿಜೆಪಿ ಎಲ್ಲ ಸಮುದಾಯಗಳನ್ನು ಒಂದಾಗಿ ಕಂಡಿರುವುದರಿಂದ ಕಮಲ ಅರಳಿದೆ. ಎಲ್ಲಿಯೇ ಹೋದರೂ ಕಮಲ ಅರಳುತ್ತದೆ ಅನ್ನುವ ವಿಶ್ವಾಸವಿದೆ ಎಂದರು.

‘ಯಡಿಯೂರಪ್ಪ ಅವರ ಕೆಲಸಗಳೇ ಗೆಲುವಿಗೆ ಶ್ರೀರಕ್ಷೆ. ಬರುವ ದಿನಗಳಲ್ಲಿ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಲ್ಲಿ ಉಪ ಚುನಾವಣೆ ಬರಲಿದೆ. ಬಸವ ಕಲ್ಯಾಣದಲ್ಲಿ ಇಂದು ಮುಖಂಡರನ್ನು ಭೇಟಿಯಾಗುತ್ತೇನೆ. ಬಿಜೆಪಿ ರಾಜ್ಯ‌ ಘಟಕದ ಅಧ್ಯಕ್ಷರು ಯಾವ ಕ್ಷೇತ್ರದ ಜವಾಬ್ದಾರಿ ಕೊಟ್ಟರೂ ಅದನ್ನು ವಹಿಸಿಕೊಳ್ಳುತ್ತೇನೆ. ಬಸವ ಕಲ್ಯಾಣದಲ್ಲಿ ನಾನಂತೂ ಆಕಾಂಕ್ಷಿಯಲ್ಲ. ಬಿಜೆಪಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಪಕ್ಷದ ಹೈಕಮಾಂಡ್ ನಿರ್ಣಯಿಸುವ ಅಭ್ಯರ್ಥಿ ಪರ ಕೆಲಸ ಮಾಡುತ್ತೇವೆ’ ಎಂದರು.

ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಸುಭಾಷ್ ಗುತ್ತೇದಾರ, ದತ್ತಾತ್ರೇಯ ಪಾಟೀಲ, ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಅಂಬಿಗರ ‌ಚೌಡಯ್ಯ ಅಭಿವೃದ್ಧಿ ‌ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಬಿಜೆಪಿ ಗ್ರಾಮಾಂತರ ‌ಜಿಲ್ಲಾ ಅಧ್ಯಕ್ಷ ‌ಶಿವರಾಜ ಪಾಟೀಲ ರದ್ದೇವಾಡಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT