ಇದಕ್ಕೂ ಮುನ್ನ ಗುರುವಾರ, ಕಲಬುರ್ಗಿಯ ಕರುಣೇಶ್ವರ ನಗರದ ನಿವಾಸಿ ಪ್ರೊ.ಬುದ್ಧೇಶ್ ಶಂಕರ ಸಿಂಗೆ (53) ಅವರು ಸೊಲ್ಲಾಪುರದ ಆಸ್ಪತ್ರೆಯಲ್ಲಿ ಮೃತಪಟ್ಟರು. ಅವರು ಕೊರೊನಾದಿಂದ ಎರಡು ವಾರಗಳ ಹಿಂದೆಯೇ ಗುಣವಾಗಿದ್ದರು. ಆದರೆ, ಬಹುಅಂಗಾಂಗ ವೈಫಲ್ಯದ ಕಾರಣ ಮತ್ತೆ ಆಸ್ಪತ್ರೆ ಸೇರಿದ್ದರು. ಇವರ ಸಾವಿಗೂ ಬ್ಲ್ಯಾಕ್ ಫಂಗಸ್ ಕಾರಣವಾಗಿರಬಹುದು ಎಂದು ಚಿಕಿತ್ಸೆ ನೀಡಿದ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.