<p><strong>ಸೇಡಂ: </strong>‘ಪ್ರಸ್ತುತ ಸಂದರ್ಭದಲ್ಲಿ ಹೆಚ್ಚುತ್ತಿರುವ ಅಪಘಾತಗಳ ಸಂಖ್ಯೆಯಿಂದಾಗಿ ಪ್ರತಿಕ್ಷಣಕ್ಕೂ ರಕ್ತದ ಅವಶ್ಯಕತೆ ಹೆಚ್ಚುತ್ತಿದೆ. ಆದ್ದರಿಂದ ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಉಳಿಸಬೇಕು’ ಎಂದು ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ್ ಹೇಳಿದರು.</p>.<p>ಪಟ್ಟಣದ ನಿಸರ್ಗ ಆಸ್ಪತ್ರೆಯಲ್ಲಿ ಸೋಮವಾರ ವಿಶ್ವಹಿಂದೂ ಪರಿಷತ್ ತಾಲ್ಲೂಕು ಘಟಕ, ಭಜರಂಗದಳ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ವೈದ್ಯರ ಪ್ರಕಾರ ಒಬ್ಬ ವ್ಯಕ್ತಿ ರಕ್ತದಾನ ಮಾಡಿದಲ್ಲಿ ಆತನ ಆರೋಗ್ಯ ಚೆನ್ನಾಗಿರುತ್ತದೆ. ಅಲ್ಲದೆ ಹೊಸ ರಕ್ತ ಉತ್ಪತ್ತಿಯಾಗಿ, ಮಾನವನ ತೇಜಸ್ಸು ಹೆಚ್ಚುತ್ತದೆ’ ಎಂದು ತಿಳಿಸಿದರು.</p>.<p>ವಿಶ್ವಹಿಂದೂ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಮುಸ್ತಾಜರ್ ಮಾತನಾಡಿ, ‘ವಿಶ್ವಹಿಂದೂ ಪರಿಷತ್ ರಕ್ತದಾನ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಸಮಾಜಕ್ಕೆ ತನ್ನದೇಆದ ಕೊಡುಗೆ ನೀಡುತ್ತಿದೆ’ ಎಂದರು.</p>.<p>ಲಯನ್ಸ್ ಕ್ಲಬ್ನ ಶ್ರೀನಿವಾಸ ಮೊಕದಮ್, ಡಾ.ಕೀರ್ತಿ ಪಾಟೀಲ, ಸಚಿನ ಮೀನಕೇರಿ, ಅವಿನಾಶ ಮಡಿವಾಳ, ವೆಂಕಟರೆಡ್ಡಿ ಪಾಟೀಲ, ಪ್ರದೀಪ ಪಾಟೀಲ ಹೊಸಳ್ಳಿ, ಕಾಶಿನಾಥ ದೊಡ್ಡಮನಿ, ನಚಿಕೇತ ಹರಸೂರೆ, ಹಫವಪ್ಪ ಮಾಲಿ, ಅನೀಲರೆಡ್ಡಿ ಸಂಗ್ಯಂಪಲ್ಲಿ, ರಾಜು ಜಕ್ಕನಬೋವಿ, ಮುರುಗೇಂದ್ರಸ್ವಾಮಿ, ನಾರಾಯಣ ಯಾನಾಗುಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ: </strong>‘ಪ್ರಸ್ತುತ ಸಂದರ್ಭದಲ್ಲಿ ಹೆಚ್ಚುತ್ತಿರುವ ಅಪಘಾತಗಳ ಸಂಖ್ಯೆಯಿಂದಾಗಿ ಪ್ರತಿಕ್ಷಣಕ್ಕೂ ರಕ್ತದ ಅವಶ್ಯಕತೆ ಹೆಚ್ಚುತ್ತಿದೆ. ಆದ್ದರಿಂದ ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಉಳಿಸಬೇಕು’ ಎಂದು ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ್ ಹೇಳಿದರು.</p>.<p>ಪಟ್ಟಣದ ನಿಸರ್ಗ ಆಸ್ಪತ್ರೆಯಲ್ಲಿ ಸೋಮವಾರ ವಿಶ್ವಹಿಂದೂ ಪರಿಷತ್ ತಾಲ್ಲೂಕು ಘಟಕ, ಭಜರಂಗದಳ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ವೈದ್ಯರ ಪ್ರಕಾರ ಒಬ್ಬ ವ್ಯಕ್ತಿ ರಕ್ತದಾನ ಮಾಡಿದಲ್ಲಿ ಆತನ ಆರೋಗ್ಯ ಚೆನ್ನಾಗಿರುತ್ತದೆ. ಅಲ್ಲದೆ ಹೊಸ ರಕ್ತ ಉತ್ಪತ್ತಿಯಾಗಿ, ಮಾನವನ ತೇಜಸ್ಸು ಹೆಚ್ಚುತ್ತದೆ’ ಎಂದು ತಿಳಿಸಿದರು.</p>.<p>ವಿಶ್ವಹಿಂದೂ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಮುಸ್ತಾಜರ್ ಮಾತನಾಡಿ, ‘ವಿಶ್ವಹಿಂದೂ ಪರಿಷತ್ ರಕ್ತದಾನ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಸಮಾಜಕ್ಕೆ ತನ್ನದೇಆದ ಕೊಡುಗೆ ನೀಡುತ್ತಿದೆ’ ಎಂದರು.</p>.<p>ಲಯನ್ಸ್ ಕ್ಲಬ್ನ ಶ್ರೀನಿವಾಸ ಮೊಕದಮ್, ಡಾ.ಕೀರ್ತಿ ಪಾಟೀಲ, ಸಚಿನ ಮೀನಕೇರಿ, ಅವಿನಾಶ ಮಡಿವಾಳ, ವೆಂಕಟರೆಡ್ಡಿ ಪಾಟೀಲ, ಪ್ರದೀಪ ಪಾಟೀಲ ಹೊಸಳ್ಳಿ, ಕಾಶಿನಾಥ ದೊಡ್ಡಮನಿ, ನಚಿಕೇತ ಹರಸೂರೆ, ಹಫವಪ್ಪ ಮಾಲಿ, ಅನೀಲರೆಡ್ಡಿ ಸಂಗ್ಯಂಪಲ್ಲಿ, ರಾಜು ಜಕ್ಕನಬೋವಿ, ಮುರುಗೇಂದ್ರಸ್ವಾಮಿ, ನಾರಾಯಣ ಯಾನಾಗುಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>