<p><strong>ಕಾಳಗಿ</strong>: ತಾಲ್ಲೂಕಿನ ಹೇರೂರ ಕೆ. ಬೆಣ್ಣೆತೊರಾ ಜಲಾಶಯದ ಕೆಳಭಾಗದ ನೀರಿನಲ್ಲಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಶನಿವಾರ ಸಂಭವಿಸಿದೆ.</p>.<p>ಕಲಬುರಗಿಯ ಆಜಾದಪುರ ನಿವಾಸಿ ಹಸನ್ ಅಬ್ದುಲ್ ಗಫರ್ (17) ಎಂಬುವವ ನಾಪತ್ತೆಯಾದ ಯುವಕ.</p>.<p>ಶನಿವಾರ 10 ಜನ ಗೆಳೆಯರು ಜಲಾಶಯಕ್ಕೆ ಬಂದಿದ್ದಾರೆ. ಜಲಾಶಯದ ಕೆಳಭಾಗದ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದಾರೆ. ಈ ವೇಳೆ ಕಾಲುಜಾರಿ ಹಸನ್ ಮತ್ತು ಸರ್ಪರಾಜ್ ಜೈಯದ್ ಮನ್ಸೂರ (19) ನೀರಿನಲ್ಲಿ ಬಿದ್ದಿದ್ದಾರೆ. ಸರ್ಫರಾಜ್ ನೀರಿನಲ್ಲೇ ಗಿಡವೊಂದರ ಆಸರೆ ಪಡೆದರೆ, ಹಸನ್ ನಾಪತ್ತೆಯಾಗಿದ್ದಾನೆ.</p>.<p>ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಪೃಥ್ವಿರಾಜ ಪಾಟೀಲ, ಕಂದಾಯ ನಿರೀಕ್ಷಕ ರವೀಂದ್ರ ಮುತ್ತಗಿ ಹಾಗೂ ಕಾಳಗಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.</p>.<p>ಕಲಬುರಗಿ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ನೇತೃತ್ವದ ತಂಡ ಧಾವಿಸಿ, ಗಿಡದ ಆಸರೆ ಪಡೆದಿದ್ದ ಸರ್ಫರಾಜನನ್ನು ದಡಕ್ಕೆ ತಂದು ರಕ್ಷಿಸಿದ್ದಾರೆ.</p>.<p>ಹಸನ್ಗಾಗಿ ಶೆಳ್ಳಗಿ, ಕಲ್ಲಹಿಪ್ಪರಗಿ ತನಕ ಹುಡುಕಾಡಿದರೂ ಪತ್ತೆಯಾಗಿಲ್ಲ. ರಾತ್ರಿಯಾಗಿದ್ದರಿಂದ ಕಾರ್ಯಾಚರಣೆ ತಾತ್ಕಾಲಿಕವಾಗಿ ಮೊಟಕುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ</strong>: ತಾಲ್ಲೂಕಿನ ಹೇರೂರ ಕೆ. ಬೆಣ್ಣೆತೊರಾ ಜಲಾಶಯದ ಕೆಳಭಾಗದ ನೀರಿನಲ್ಲಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಶನಿವಾರ ಸಂಭವಿಸಿದೆ.</p>.<p>ಕಲಬುರಗಿಯ ಆಜಾದಪುರ ನಿವಾಸಿ ಹಸನ್ ಅಬ್ದುಲ್ ಗಫರ್ (17) ಎಂಬುವವ ನಾಪತ್ತೆಯಾದ ಯುವಕ.</p>.<p>ಶನಿವಾರ 10 ಜನ ಗೆಳೆಯರು ಜಲಾಶಯಕ್ಕೆ ಬಂದಿದ್ದಾರೆ. ಜಲಾಶಯದ ಕೆಳಭಾಗದ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದಾರೆ. ಈ ವೇಳೆ ಕಾಲುಜಾರಿ ಹಸನ್ ಮತ್ತು ಸರ್ಪರಾಜ್ ಜೈಯದ್ ಮನ್ಸೂರ (19) ನೀರಿನಲ್ಲಿ ಬಿದ್ದಿದ್ದಾರೆ. ಸರ್ಫರಾಜ್ ನೀರಿನಲ್ಲೇ ಗಿಡವೊಂದರ ಆಸರೆ ಪಡೆದರೆ, ಹಸನ್ ನಾಪತ್ತೆಯಾಗಿದ್ದಾನೆ.</p>.<p>ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಪೃಥ್ವಿರಾಜ ಪಾಟೀಲ, ಕಂದಾಯ ನಿರೀಕ್ಷಕ ರವೀಂದ್ರ ಮುತ್ತಗಿ ಹಾಗೂ ಕಾಳಗಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.</p>.<p>ಕಲಬುರಗಿ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ನೇತೃತ್ವದ ತಂಡ ಧಾವಿಸಿ, ಗಿಡದ ಆಸರೆ ಪಡೆದಿದ್ದ ಸರ್ಫರಾಜನನ್ನು ದಡಕ್ಕೆ ತಂದು ರಕ್ಷಿಸಿದ್ದಾರೆ.</p>.<p>ಹಸನ್ಗಾಗಿ ಶೆಳ್ಳಗಿ, ಕಲ್ಲಹಿಪ್ಪರಗಿ ತನಕ ಹುಡುಕಾಡಿದರೂ ಪತ್ತೆಯಾಗಿಲ್ಲ. ರಾತ್ರಿಯಾಗಿದ್ದರಿಂದ ಕಾರ್ಯಾಚರಣೆ ತಾತ್ಕಾಲಿಕವಾಗಿ ಮೊಟಕುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>