<p><strong>ಕಲಬುರಗಿ</strong>: ನಗರ ಜಿಲ್ಲಾ ಕೋರ್ಟ್ ಕಟ್ಟಡಗಳ ಸಂಕೀರ್ಣದಲ್ಲಿ ಬಾಂಬ್ ಇರಿಸಿದ ಇಮೇಲ್ ಕರೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ತಪಾಸಣಾ ತಂಡಗಳು ತೀವ್ರ ತಪಾಸಣೆ ನಡೆಸಿದವು.</p><p>ಮಾಹಿತಿ ಬಂದ ತಕ್ಷಣ ಕೂಡಲೇ ಕೋರ್ಟ್ ಕಟ್ಟಡಗಳಲ್ಲಿರುವ ನ್ಯಾಯಾಧೀಶರು, ವಕೀಲರು, ನ್ಯಾಯಾಂಗ ಇಲಾಖೆ ನೌಕರರು ಹಾಗೂ ಕಕ್ಷಿದಾರರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಹೊರಗೆ ಕಳುಹಿಸಿದರು.</p><p>ಆತಂಕದಲ್ಲಿದ್ದ ಜನರು ಕಟ್ಟಡಗಳಿಂದ ಹೊರಬಂದು ಕೋರ್ಟ್ ಆವರಣದಲ್ಲಿ ಜಮಾಯಿಸಿದರು.</p><p>ಕೆಲ ಹೊತ್ತು ಏನು ನಡೆಯುತ್ತಿದೆ ಎಂಬುದೂ ತಿಳಿಯದೇ ವಕೀಲರು, ಗ್ರಾಮೀಣ ಪ್ರದೇಶದ ಕಕ್ಷಿದಾರರು ಗೊಂದಲಕ್ಕೆ ಒಳಗಾದರು.</p><p><strong>ಆರ್ಡಿಎಕ್ಸ್ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ:</strong></p><p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ವಿಳಾಸಕ್ಕೆ ಮಂಗಳವಾರ ಬೆಳಿಗ್ಗೆ 5.40ಕ್ಕೆ ಇ-ಮೇಲ್ ಮಾಡಿರುವ ದುಷ್ಕರ್ಮಿಗಳು 'ಬೆಳಿಗ್ಗೆ 11:50ಕ್ಕೆ ನಿಮ್ಮ ನ್ಯಾಯಾಲಯ/ ನ್ಯಾಯಾಧೀಶರ ಕೊಠಡಿಯಲ್ಲಿ ವಿಷಾನಿಲ ತುಂಬಿದ ಸೈನಾಡ್ ಆರ್ಡಿಎಕ್ಸ್ ಬಾಂಬ್ ಸ್ಫೋಟಗೊಳ್ಳಲಿದ್ದು, ಬೆಳಿಗ್ಗೆ 11 ಗಂಟೆಯೊಳಗೆ ನಿರಪರಾಧಿ ನ್ಯಾಯಾಧೀಶರು ಹಾಗೂ ನಾಗರಿಕರನ್ನು ಸ್ಥಳಾಂತರಿಸಿ' ಎಂದು ಎಚ್ಚರಿಕೆ ನೀಡಲಾಗಿದೆ.</p><p>ಮೂರು ಪುಟಗಳ ಇ-ಮೇಲ್ ಮುಸ್ಲಿಂ ಹೆಸರಿನ ಇಮೇಲ್ ವಿಳಾಸದಿಂದ ಬಂದಿರುವುದಾಗಿ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರ ಜಿಲ್ಲಾ ಕೋರ್ಟ್ ಕಟ್ಟಡಗಳ ಸಂಕೀರ್ಣದಲ್ಲಿ ಬಾಂಬ್ ಇರಿಸಿದ ಇಮೇಲ್ ಕರೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ತಪಾಸಣಾ ತಂಡಗಳು ತೀವ್ರ ತಪಾಸಣೆ ನಡೆಸಿದವು.</p><p>ಮಾಹಿತಿ ಬಂದ ತಕ್ಷಣ ಕೂಡಲೇ ಕೋರ್ಟ್ ಕಟ್ಟಡಗಳಲ್ಲಿರುವ ನ್ಯಾಯಾಧೀಶರು, ವಕೀಲರು, ನ್ಯಾಯಾಂಗ ಇಲಾಖೆ ನೌಕರರು ಹಾಗೂ ಕಕ್ಷಿದಾರರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಹೊರಗೆ ಕಳುಹಿಸಿದರು.</p><p>ಆತಂಕದಲ್ಲಿದ್ದ ಜನರು ಕಟ್ಟಡಗಳಿಂದ ಹೊರಬಂದು ಕೋರ್ಟ್ ಆವರಣದಲ್ಲಿ ಜಮಾಯಿಸಿದರು.</p><p>ಕೆಲ ಹೊತ್ತು ಏನು ನಡೆಯುತ್ತಿದೆ ಎಂಬುದೂ ತಿಳಿಯದೇ ವಕೀಲರು, ಗ್ರಾಮೀಣ ಪ್ರದೇಶದ ಕಕ್ಷಿದಾರರು ಗೊಂದಲಕ್ಕೆ ಒಳಗಾದರು.</p><p><strong>ಆರ್ಡಿಎಕ್ಸ್ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ:</strong></p><p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ವಿಳಾಸಕ್ಕೆ ಮಂಗಳವಾರ ಬೆಳಿಗ್ಗೆ 5.40ಕ್ಕೆ ಇ-ಮೇಲ್ ಮಾಡಿರುವ ದುಷ್ಕರ್ಮಿಗಳು 'ಬೆಳಿಗ್ಗೆ 11:50ಕ್ಕೆ ನಿಮ್ಮ ನ್ಯಾಯಾಲಯ/ ನ್ಯಾಯಾಧೀಶರ ಕೊಠಡಿಯಲ್ಲಿ ವಿಷಾನಿಲ ತುಂಬಿದ ಸೈನಾಡ್ ಆರ್ಡಿಎಕ್ಸ್ ಬಾಂಬ್ ಸ್ಫೋಟಗೊಳ್ಳಲಿದ್ದು, ಬೆಳಿಗ್ಗೆ 11 ಗಂಟೆಯೊಳಗೆ ನಿರಪರಾಧಿ ನ್ಯಾಯಾಧೀಶರು ಹಾಗೂ ನಾಗರಿಕರನ್ನು ಸ್ಥಳಾಂತರಿಸಿ' ಎಂದು ಎಚ್ಚರಿಕೆ ನೀಡಲಾಗಿದೆ.</p><p>ಮೂರು ಪುಟಗಳ ಇ-ಮೇಲ್ ಮುಸ್ಲಿಂ ಹೆಸರಿನ ಇಮೇಲ್ ವಿಳಾಸದಿಂದ ಬಂದಿರುವುದಾಗಿ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>