ಕಲಬುರ್ಗಿ ಸಾಂಸ್ಕೃತಿಕ ಪ್ರತಿಷ್ಠಾನ, ಬೀದರ್ನ ಸಿದ್ಧೇಶ್ವರ ಪ್ರಕಾಶನದ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪೋತೆ, ಕುವೆಂಪು ಅವರು ಸಾಕಷ್ಟು ಸಮಸ್ಯೆ, ಸವಾಲುಗಳನ್ನು ಎದುರಿಸಿ ಅವುಗಳನ್ನು ದಿಟ್ಟತನದಿಂದ ಎದುರಿಸಿದರು. ಇಂದಿನ ಯುವ ಲೇಖಕರು ಸಾಂಪ್ರದಾಯಿಕತೆಯನ್ನು ಮೀರಿ ಬೆಳೆಯಬೇಕು. ಜಾತಿ ಸಂಕೋಲೆಗಳನ್ನು ಮೀರಿ ಸಮಾಜಮುಖಿಯಾಗಿ ಬೆಳೆಯಬೇಕು. ಎಡ ಬಲ ಪಂಥಕ್ಕೆ ಸೀಮಿತಗೊಳ್ಳದೇ ಮನುಷ್ಯ ಪಂಥದವರಾಗಬೇಕು. ಇದು ಇಂದಿನ ತುರ್ತು ಎಂದರು.