<p><strong>ಕಲಬುರ್ಗಿ: </strong>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ.6 ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಕನ್ನಡ ಭವನದಲ್ಲಿ ‘ಸಾಧಕರ ಮನದಾಳದ ಮಾತು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು,‘ಹಾರಕೂಡದ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಕೃತಿ ಬಿಡುಗಡೆ ಮಾಡುವರು. ಪ್ರಾಧ್ಯಾಪಕ ಕಲ್ಯಾಣರಾವ ಪಾಟೀಲ ಕೃತಿ ಕುರಿತು ಮಾತನಾಡುವರು. ಮಾಜಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಭಾಗವಹಿಸುವರು’ ಎಂದು ಹೇಳಿದರು.</p>.<p>ಇದುವರೆಗೂ ಹಿರಿಯರ ಹೆಜ್ಜೆ ಗುರುತು ದಾಖಲಿಸುವ ಕೆಲಸ ಆಗಿಲ್ಲ. ದಾಖಲಿಸಿ, ಮುಂದಿನ ಪೀಳಿಗೆಗೆ ದಾಟಿಸುವ ಉದ್ದೇಶದಿಂದ ಈ ಕೆಲಸ ಮಾಡುತ್ತಿದ್ದೇವೆ ಎಂದರು.</p>.<p>ಸಾಧಕರ ಜೀವನ ಪರಿಚಯಿಸುವ ಉದ್ದೇಶದಿಂದ 2016 ರ ಜುಲೈನಲ್ಲಿ ಕಲಬುರ್ಗಿಯ ಕಸಾಪದಲ್ಲಿ ಮನದಾಳದ ಮಾತು ಕಾರ್ಯಕ್ರಮ ಆರಂಭಿಸಲಾಯಿತು. ಇದುವರೆಗೂ ಎಲ್ಲ ಕ್ಷೇತ್ರದ 25 ಜನ ಸಾಧಕರು ಭಾಗವಹಿಸಿ, ಅನುಭವದ ಬುತ್ತಿಯನ್ನು ಬಿಚ್ಚಿಟ್ಟಿದ್ದಾರೆ. ದಾನಿಗಳ ನೆರವಿನಿಂದ ಅದಕ್ಕೆ ಪುಸ್ತಕ ರೂಪ ನೀಡಲಾಗಿದೆ. ಇದನ್ನು ಡಾ.ವಿಜಯಕುಮಾರ ಜಿ.ಪರುತೆ ಸಂಪಾದಿಸಿದ್ದಾರೆ ಎಂದು ಹೇಳಿದರು.</p>.<p>ಪೂಜ್ಯ ದೊಡ್ಡಪ್ಪ ಅಪ್ಪ, ಸುರಪುರದ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಹಲವು ಸಾಧಕರ ಕುರಿತು ವಿಸ್ತೃತ ಮಾಹಿತಿ ಎಲ್ಲೂ ದೊರೆಯುವುದಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಅವರ ಕುರಿತು ಮರಿಯಲಿ ಹೆಂಗಾ ನಿಮ್ಮ? ಎನ್ನುವ ಪುಸ್ತಕ ಪ್ರಕಟಿಸುವ ಯೋಜನೆ ಇದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ.ವಿಜಯಕುಮಾರ ಜಿ.ಪರುತೆ, ಮಡಿವಾಳಪ್ಪ ನಾಗರಹಳ್ಳಿ, ಗೌರವ ಕೋಶಾಧ್ಯಕ್ಷ ದೌಲತರಾವ ಮಾ. ಪಾಟೀಲ, ಅಂಬಾಜಿ ಕೋಲ್ಗಿ, ಶಿವಾನಂದ ಕಲಶೆಟ್ಟಿ ಹಾಗೂ ಆನಂದ ನಂದೂರಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ.6 ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಕನ್ನಡ ಭವನದಲ್ಲಿ ‘ಸಾಧಕರ ಮನದಾಳದ ಮಾತು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು,‘ಹಾರಕೂಡದ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಕೃತಿ ಬಿಡುಗಡೆ ಮಾಡುವರು. ಪ್ರಾಧ್ಯಾಪಕ ಕಲ್ಯಾಣರಾವ ಪಾಟೀಲ ಕೃತಿ ಕುರಿತು ಮಾತನಾಡುವರು. ಮಾಜಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಭಾಗವಹಿಸುವರು’ ಎಂದು ಹೇಳಿದರು.</p>.<p>ಇದುವರೆಗೂ ಹಿರಿಯರ ಹೆಜ್ಜೆ ಗುರುತು ದಾಖಲಿಸುವ ಕೆಲಸ ಆಗಿಲ್ಲ. ದಾಖಲಿಸಿ, ಮುಂದಿನ ಪೀಳಿಗೆಗೆ ದಾಟಿಸುವ ಉದ್ದೇಶದಿಂದ ಈ ಕೆಲಸ ಮಾಡುತ್ತಿದ್ದೇವೆ ಎಂದರು.</p>.<p>ಸಾಧಕರ ಜೀವನ ಪರಿಚಯಿಸುವ ಉದ್ದೇಶದಿಂದ 2016 ರ ಜುಲೈನಲ್ಲಿ ಕಲಬುರ್ಗಿಯ ಕಸಾಪದಲ್ಲಿ ಮನದಾಳದ ಮಾತು ಕಾರ್ಯಕ್ರಮ ಆರಂಭಿಸಲಾಯಿತು. ಇದುವರೆಗೂ ಎಲ್ಲ ಕ್ಷೇತ್ರದ 25 ಜನ ಸಾಧಕರು ಭಾಗವಹಿಸಿ, ಅನುಭವದ ಬುತ್ತಿಯನ್ನು ಬಿಚ್ಚಿಟ್ಟಿದ್ದಾರೆ. ದಾನಿಗಳ ನೆರವಿನಿಂದ ಅದಕ್ಕೆ ಪುಸ್ತಕ ರೂಪ ನೀಡಲಾಗಿದೆ. ಇದನ್ನು ಡಾ.ವಿಜಯಕುಮಾರ ಜಿ.ಪರುತೆ ಸಂಪಾದಿಸಿದ್ದಾರೆ ಎಂದು ಹೇಳಿದರು.</p>.<p>ಪೂಜ್ಯ ದೊಡ್ಡಪ್ಪ ಅಪ್ಪ, ಸುರಪುರದ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಹಲವು ಸಾಧಕರ ಕುರಿತು ವಿಸ್ತೃತ ಮಾಹಿತಿ ಎಲ್ಲೂ ದೊರೆಯುವುದಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಅವರ ಕುರಿತು ಮರಿಯಲಿ ಹೆಂಗಾ ನಿಮ್ಮ? ಎನ್ನುವ ಪುಸ್ತಕ ಪ್ರಕಟಿಸುವ ಯೋಜನೆ ಇದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ.ವಿಜಯಕುಮಾರ ಜಿ.ಪರುತೆ, ಮಡಿವಾಳಪ್ಪ ನಾಗರಹಳ್ಳಿ, ಗೌರವ ಕೋಶಾಧ್ಯಕ್ಷ ದೌಲತರಾವ ಮಾ. ಪಾಟೀಲ, ಅಂಬಾಜಿ ಕೋಲ್ಗಿ, ಶಿವಾನಂದ ಕಲಶೆಟ್ಟಿ ಹಾಗೂ ಆನಂದ ನಂದೂರಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>