ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾವಿಗೆ ಬಿದ್ದಿದ್ದ ಬಾಲಕನ ಶವ ಪತ್ತೆ

Last Updated 30 ಅಕ್ಟೋಬರ್ 2020, 10:40 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ದುಬೈ ಕಾಲೊನಿಯಲ್ಲಿ ಮಂಗಳವಾರ ಬಾವಿಯಲ್ಲಿ ಮೀನು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದಿದ್ದ ಬಾಲಕನ ಶವ ಬುಧವಾರ ದೊರೆತಿದೆ.

ಕಾಲೊನಿ ಸಮೀಪದ ಲಂಗೋಟಿ ಪೀರ್ ದರ್ಗಾ ಸಮೀಪದ ಶುಭಂ ರಾಜು ಗೌಳಿ (12) ಸಾವಿಗೀಡಾದ ಬಾಲಕ. ಮಂಗಳವಾರ ಸಂಜೆ ತನ್ನ ‌‌ಇಬ್ಬರು ಸ್ನೇಹಿತರೊಂದಿಗೆ ಸೇರಿ ಬಾವಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವೇಳೆ ಕಾಲು ಜಾರಿ ಬಾವಿಯಲ್ಲಿ ಬಿದ್ದಿದ್ದ. ಅಗ್ನಿಶಾಮಕ ದಳ ಸಿಬ್ಬಂದಿಯ ಕಾರ್ಯಾಚರಣೆ ನಡೆಸಿ ಬುಧವಾರ ರಾತ್ರಿ ಬಾಲಕನ ಶವ ಹೊರ ತೆಗೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಮಚ್ಚೆಂದ್ರನಾಥ ಪ್ರಮೋದ, ಪ್ರಕಾಶ, ಖಲಿಲ, ಬಸವರಾಜ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT