‘ಸಮಾಜದ ಯುವಕರು ಸಾಫ್ಟ್ವೇರ್, ಹೊರ ರಾಷ್ಟ್ರಗಳಿಗೆ ಉದ್ಯೋಗ ಅರಸಿ ಹೋಗುತ್ತಿದ್ದಾರೆ. ಐಎಎಸ್, ಐಪಿಎಸ್, ಕೆಎಎಸ್ನಂತಹ ಆಡಳಿತಾತ್ಮಕ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ, ಬ್ರಾಹ್ಮಣ ಹಾಗೂ ಅನ್ಯ ಸಮಾಜದ ಯುವಕರನ್ನು ಒಳಗೊಂಡಂತೆ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ತರಬೇತಿ ನೀಡಲಾಗುವುದು. ಬೋಧನೆ ಮಾಡುವಂತೆ ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಕೆಲವರು ಒಪ್ಪಿಗೆ ನೀಡಿದ್ದಾರೆ’ ಎಂದರು.