<p>ಕಲಬುರ್ಗಿ: ಲೋಕೋಪಯೋಗಿ ಇಲಾಖೆಯ ಆಳಂದ ಕಚೇರಿಯಲ್ಲಿ ಶುಕ್ರವಾರ, ಕಲ್ಲು ಕ್ವಾರಿಗೆ ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡಲು ₹ 10 ಸಾವಿರ ಲಂಚ ಪಡೆಯುತ್ತಿದ್ದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಹಾಗೂ ಸಿಬ್ಬಂದಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.</p>.<p>ಬ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೀಸಿದ ಬಲೆಗೆ ಎಂಜಿನಿಯರ್ ಗುರುರಾಜ್ ಕಳಸ್ಕರ್ ಹಾಗೂ ಕಚೇರಿಯ ಸಿಬ್ಬಂದಿ ವಿಜಯಕುಮಾರ್ ಚಿಟಗುಪ್ಪಕರ್ ಸಿಕ್ಕಿಬಿದಿದ್ದಾರೆ ಎಂದು ಎಸಿಬಿ ಎಸ್ಪಿ ಮೇಘಣ್ಣವರ ತಿಳಿಸಿದ್ದಾರೆ.</p>.<p>ಆಳಂದದ ಮೆಹಬೂಬ್ ಸಾಬ್ ಎನ್ನುವವರು ಕಲ್ಲು ಕ್ವಾರಿಯಲ್ಲಿ ಗಣಿಗಾರಿಕೆ ಮಾಡಲು ಅರ್ಜಿ ಸಲ್ಲಿಸಿದ್ದರು. ಅವರಿಗೆ ಅನುಮತಿ ಸಿಕ್ಕ ಕ್ವಾರಿಗೆ ನಿರಾಕ್ಷೇಪಣಾ ಪತ್ರಕ್ಕಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಕಚೇರಿಗೆ ಪದೇಪದೇ ಅಲೆಯುತ್ತಿದ್ದರು. ಹಣ ನೀಡಿದರೆ ಮಾತ್ರ ಪ್ರಮಾಣ ಪತ್ರ ನೀಡುವುದಾಗಿ ಎಂಜಿನಿಯರ್ ಗುರುರಾಜ್ ₹ 10 ಸಾವಿರ ಬೇಡಿಕೆ ಇಟ್ಟಿದ್ದಾರೆ ಎಂದು ಅವರು ಎಸಿಬಿಗೆ ದೂರು ನೀಡಿದ್ದರು.</p>.<p>ಶುಕ್ರವಾರ ಮಧ್ಯಾಹ್ನ ಮೆಹಬೂಬ್ಸಾಬ್ ಅವರು ಗುರುರಾಜ್ ಹಾಗೂ ವಿಜಯಕುಮಾರ ಅವರನ್ನು ಸಂಪರ್ಕಿಸಿ ಹಣ ನೀಡಲು ಬಂದರು. ಇಬ್ಬರೂ ಹಣ ಎಣಿಸಿಕೊಳ್ಳುವ ಹೊತ್ತಿಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದರು ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರ್ಗಿ: ಲೋಕೋಪಯೋಗಿ ಇಲಾಖೆಯ ಆಳಂದ ಕಚೇರಿಯಲ್ಲಿ ಶುಕ್ರವಾರ, ಕಲ್ಲು ಕ್ವಾರಿಗೆ ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡಲು ₹ 10 ಸಾವಿರ ಲಂಚ ಪಡೆಯುತ್ತಿದ್ದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಹಾಗೂ ಸಿಬ್ಬಂದಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.</p>.<p>ಬ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೀಸಿದ ಬಲೆಗೆ ಎಂಜಿನಿಯರ್ ಗುರುರಾಜ್ ಕಳಸ್ಕರ್ ಹಾಗೂ ಕಚೇರಿಯ ಸಿಬ್ಬಂದಿ ವಿಜಯಕುಮಾರ್ ಚಿಟಗುಪ್ಪಕರ್ ಸಿಕ್ಕಿಬಿದಿದ್ದಾರೆ ಎಂದು ಎಸಿಬಿ ಎಸ್ಪಿ ಮೇಘಣ್ಣವರ ತಿಳಿಸಿದ್ದಾರೆ.</p>.<p>ಆಳಂದದ ಮೆಹಬೂಬ್ ಸಾಬ್ ಎನ್ನುವವರು ಕಲ್ಲು ಕ್ವಾರಿಯಲ್ಲಿ ಗಣಿಗಾರಿಕೆ ಮಾಡಲು ಅರ್ಜಿ ಸಲ್ಲಿಸಿದ್ದರು. ಅವರಿಗೆ ಅನುಮತಿ ಸಿಕ್ಕ ಕ್ವಾರಿಗೆ ನಿರಾಕ್ಷೇಪಣಾ ಪತ್ರಕ್ಕಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಕಚೇರಿಗೆ ಪದೇಪದೇ ಅಲೆಯುತ್ತಿದ್ದರು. ಹಣ ನೀಡಿದರೆ ಮಾತ್ರ ಪ್ರಮಾಣ ಪತ್ರ ನೀಡುವುದಾಗಿ ಎಂಜಿನಿಯರ್ ಗುರುರಾಜ್ ₹ 10 ಸಾವಿರ ಬೇಡಿಕೆ ಇಟ್ಟಿದ್ದಾರೆ ಎಂದು ಅವರು ಎಸಿಬಿಗೆ ದೂರು ನೀಡಿದ್ದರು.</p>.<p>ಶುಕ್ರವಾರ ಮಧ್ಯಾಹ್ನ ಮೆಹಬೂಬ್ಸಾಬ್ ಅವರು ಗುರುರಾಜ್ ಹಾಗೂ ವಿಜಯಕುಮಾರ ಅವರನ್ನು ಸಂಪರ್ಕಿಸಿ ಹಣ ನೀಡಲು ಬಂದರು. ಇಬ್ಬರೂ ಹಣ ಎಣಿಸಿಕೊಳ್ಳುವ ಹೊತ್ತಿಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದರು ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>