ವಾಡಿ ಕ್ರಾಸ್ನಿಂದ ಶಂಕರವಾಡಿವರೆಗೆ ನೂರಾರು ಸಂಖ್ಯೆಯಲ್ಲಿ ವಾಹನಗಳು ಗಂಟೆಗಟ್ಟಲೇ ನಿಲ್ಲುವಂತಾಗಿದೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಗಂಭೀರವಾದ ಸಮಸ್ಯೆಗಳು ಉಂಟಾಗುತ್ತಿವೆ.
ಭೀಮಯ್ಯ ಗುತ್ತೇದಾರ, ಆರ್ಯ–ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ
ಸೇತುವೆ ಕಾಮಗಾರಿ ವಿಳಂಬದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ. ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು 15 ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
ಜಗದೀಶ ಚೌರ, ತಹಶೀಲ್ದಾರ್
ಶಹಾಬಾದ್ ಇಎಸ್ಐ ಆಸ್ಪತ್ರೆ ಎದುರಿನ ಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಜನರ ಬಗ್ಗೆ ಕಾಳಜಿ ವಹಿಸಿ ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕು.
ಕನಕಪ್ಪ ದಂಡುಗುಳ್ಕರ, ವಾಡಿ–ಶಹಾಬಾದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ
ಶಹಾಬಾದ್ ಇಎಸ್ಐ ಆಸ್ಪತ್ರೆ ಎದುರು ಹದಗೆಟ್ಟ ರಸ್ತೆಯಿಂದ ಟ್ರಾಫಿಕ್ ಜಾಮ್ ಆಗಿರುವುದು