ಕಲಬುರ್ಗಿ: ‘ರಾಷ್ಟ್ರೀಯ ಕೃಷಿ ಮಾರಾಟ ಮಂಡಳಿಯವರು (ನಾಫೆಡ್) ಕಳೆದ ವರ್ಷ ಖರೀದಿಸಿದ್ದ ತೊಗರಿಯನ್ನು ಈಗ ಏಕಾಏಕಿ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದರಿಂದ ತೊಗರಿ ಬೆಲೆ ಗಣನೀಯವಾಗಿ ಇಳಿಕೆಯಾಗಲಿದ್ದು, ರೈತರಿಗೆ ಪೆಟ್ಟು ಬೀಳಲಿದೆ. ಇದನ್ನು ಕಂಡೂ ಕಾಣದಂತೆ ಬಿಜೆಪಿ ಜನಪ್ರತಿನಿಧಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ’ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ
ಟೀಕಿಸಿದ್ದಾರೆ.