<p><strong>ಕಲಬುರಗಿ:</strong> ಆಳಂದ-ಹಾವೇರಿ ವಾಯಾ ಮಾದನಹಿಪ್ಪರಗಾ ಮಾರ್ಗದ ಸಾರಿಗೆ ಬಸ್ ಕಾರ್ಯಾಚರಣೆಗೆ ಗುರುವಾರ ಆಳಂದ ತಾಲ್ಲೂಕಿನ ಮಾದನಹಿಪ್ಪರಗಾ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಲಹೆಗಾರರೂ ಆಗಿರುವ ಆಳಂದ ಶಾಸಕ ಬಿ.ಆರ್.ಪಾಟೀಲ ಚಾಲನೆ ನೀಡಿದರು.</p>.<p>ಈ ಬಸ್ ನಿತ್ಯ ಆಳಂದ ಬಸ್ ನಿಲ್ದಾಣದಿಂದ ಮಧ್ಯಾಹ್ನ 3.30ಕ್ಕೆ ಹೊರಟು, ಮಾದನ ಹಿಪ್ಪರಗಾಗೆ 4.30ಕ್ಕೆ ತಲುಪಿ ಅಲ್ಲಿಂದ ಅಫಜಲಪುರ-ಸಿಂದಗಿ-ವಿಜಯಪುರ- ಜಮಖಂಡಿ- ಲೋಕಾಪುರ, ಸವದತ್ತಿ- ಧಾರವಾಡ- ಹುಬ್ಬಳ್ಳಿ ಮಾರ್ಗವಾಗಿ ಮರು ದಿನ ಬೆಳಿಗ್ಗೆ 6 ಗಂಟೆಗೆ ಹಾವೇರಿಗೆ ತಲುಪಲಿದೆ. ಇದೇ ಮಾರ್ಗದಲ್ಲಿ ನಿತ್ಯ ಸಂಜೆ 5.30 ಗಂಟೆಗೆ ಹಾವೇರಿಯಿಂದ ಹೊರಟು ಮರುದಿನ ಬೆಳಿಗ್ಗೆ 7 ಗಂಟೆಗೆ ಆಳಂದ ತಲುಪಲಿದೆ.</p>.<p>ಈ ಸಂದರ್ಭದಲ್ಲಿ ಮಾದನಹಿಪ್ಪರಗಾ ವಿರಕ್ತ ಮಠದ ಅಭಿನವ ಶಿವಲಿಂಗ ಸ್ವಾಮೀಜಿ, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ-2ರ ಸಿದ್ದಪ್ಪ ಜಿ. ಗಂಗಾಧರ, ವಿಭಾಗೀಯ ಸಂಚಾರ ಅಧಿಕಾರಿ ರವೀಂದ್ರ ಕುಮಾರ ಡಿಗ್ಗಿ, ವಿಭಾಗೀಯ ತಾಂತ್ರಿಕ ಶಿಲ್ಪಿ ಶೇಖ ಹುಸೇನ್, ಘಟಕ ವ್ಯವಸ್ಥಾಪಕ ಯೋಗಿನಾಥ ಸರಸಂಬಿ, ಅಂಕಿಸಂಖ್ಯೆ ಅಧಿಕಾರಿ ಮಲ್ಲಿನಾಥ ಸರಸಂಬಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಆಳಂದ-ಹಾವೇರಿ ವಾಯಾ ಮಾದನಹಿಪ್ಪರಗಾ ಮಾರ್ಗದ ಸಾರಿಗೆ ಬಸ್ ಕಾರ್ಯಾಚರಣೆಗೆ ಗುರುವಾರ ಆಳಂದ ತಾಲ್ಲೂಕಿನ ಮಾದನಹಿಪ್ಪರಗಾ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಲಹೆಗಾರರೂ ಆಗಿರುವ ಆಳಂದ ಶಾಸಕ ಬಿ.ಆರ್.ಪಾಟೀಲ ಚಾಲನೆ ನೀಡಿದರು.</p>.<p>ಈ ಬಸ್ ನಿತ್ಯ ಆಳಂದ ಬಸ್ ನಿಲ್ದಾಣದಿಂದ ಮಧ್ಯಾಹ್ನ 3.30ಕ್ಕೆ ಹೊರಟು, ಮಾದನ ಹಿಪ್ಪರಗಾಗೆ 4.30ಕ್ಕೆ ತಲುಪಿ ಅಲ್ಲಿಂದ ಅಫಜಲಪುರ-ಸಿಂದಗಿ-ವಿಜಯಪುರ- ಜಮಖಂಡಿ- ಲೋಕಾಪುರ, ಸವದತ್ತಿ- ಧಾರವಾಡ- ಹುಬ್ಬಳ್ಳಿ ಮಾರ್ಗವಾಗಿ ಮರು ದಿನ ಬೆಳಿಗ್ಗೆ 6 ಗಂಟೆಗೆ ಹಾವೇರಿಗೆ ತಲುಪಲಿದೆ. ಇದೇ ಮಾರ್ಗದಲ್ಲಿ ನಿತ್ಯ ಸಂಜೆ 5.30 ಗಂಟೆಗೆ ಹಾವೇರಿಯಿಂದ ಹೊರಟು ಮರುದಿನ ಬೆಳಿಗ್ಗೆ 7 ಗಂಟೆಗೆ ಆಳಂದ ತಲುಪಲಿದೆ.</p>.<p>ಈ ಸಂದರ್ಭದಲ್ಲಿ ಮಾದನಹಿಪ್ಪರಗಾ ವಿರಕ್ತ ಮಠದ ಅಭಿನವ ಶಿವಲಿಂಗ ಸ್ವಾಮೀಜಿ, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ-2ರ ಸಿದ್ದಪ್ಪ ಜಿ. ಗಂಗಾಧರ, ವಿಭಾಗೀಯ ಸಂಚಾರ ಅಧಿಕಾರಿ ರವೀಂದ್ರ ಕುಮಾರ ಡಿಗ್ಗಿ, ವಿಭಾಗೀಯ ತಾಂತ್ರಿಕ ಶಿಲ್ಪಿ ಶೇಖ ಹುಸೇನ್, ಘಟಕ ವ್ಯವಸ್ಥಾಪಕ ಯೋಗಿನಾಥ ಸರಸಂಬಿ, ಅಂಕಿಸಂಖ್ಯೆ ಅಧಿಕಾರಿ ಮಲ್ಲಿನಾಥ ಸರಸಂಬಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>