ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಅಂದು ಬೆಳಿಗ್ಗೆ 10.30ಕ್ಕೆ ವಸ್ತುಪ್ರದರ್ಶನವನ್ನು ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಲೋಕೋಪಯೋಗಿ ಇಲಾಖೆ ಮುಖ್ಯ ಎಂಜನಿಯರ್ ಜಗನ್ನಾಥ ಹಲಿಂಗೆ, ಕೆಕೆಸಿಸಿಐ ಅಧ್ಯಕ್ಷ ಪ್ರಶಾಂತ ಮಾನಕರ ಉದ್ಘಾಟಿಸಲಿದ್ದಾರೆ. ಕಾಳಿಕಾ ಸ್ಟೀಲ್ನ ಮಾರ್ಕೆಟಿಂಗ್ ಮುಖ್ಯಸ್ಥ ಅತುಲ್ ಪಮ್ಮಾರ್ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಅನಿಲಕುಮಾರ ಗಂಗನಿ, ಪ್ರವೀಣಕುಮಾರ ಮೋದಿ ಭಾಗಿಯಾಗಲಿದ್ದಾರೆ’ ಎಂದು ತಿಳಿಸಿದರು.