ಊರಿಗೆ ತೆರಳಲು ಬಸ್ ಹತ್ತಲು ಮುಂದಾಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಹಿಜಾಬ್ ಧರಿಸಿದ್ದಳು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮಹಿಬೂಬ್ ಪಟೇಲ್, ‘ಬುರ್ಖಾ ಏಕೆ ಹಾಕಿಕೊಂಡಿಲ್ಲ’ ಎಂದು ಗದರಿದ್ದಲ್ಲದೇ ವಿದ್ಯಾರ್ಥಿನಿಯನ್ನು ಬಸ್ನಿಂದ ಹೊರಗೆ ಎಳೆದಿದ್ದರು. ಈ ಕುರಿತು ಕಮಲಾಪುರದ ಸರ್ಕಾರಿ ಕನ್ಯಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಂಬಾದಾಸ ಜಮಾದಾರ ಅವರು ಪೊಲೀಸರಿಗೆ ಚಾಲಕ ಪಟೇಲ್ ವಿರುದ್ಧ ದೂರು ನೀಡಿದ್ದರು. ದೂರನ್ನು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಘಟನೆ ಬೆನ್ನಲ್ಲೇ ಚಾಲಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.