ನೌಕರರು ಅನಿರ್ದಿಷ್ಟಾವಧಿಗೆ ಮುಷ್ಕರ ಹೂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ಉಂಟಾಗುವ ತೊಂದರೆಯನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಖಾಸಗಿ ವಾಹನಗಳನ್ನು ನಿಗದಿತ ದರದಲ್ಲಿ ವಸೂಲಿ ಮಾಡಿ ಸಂಚರಿಸಲು ಅನುಮತಿ ನೀಡಲಾಗಿದೆ. ಆದರೆ, ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಅತಿ ಹೆಚ್ಚಿನ ದರವನ್ನು ವಾಹನದ ಮಾಲೀಕರು ವಸೂಲಿ ಮಾಡುತ್ತಿದ್ದಾರೆಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಖಾಸಗಿ ವಾಹನದ ಮಾಲೀಕರು ಹೆಚ್ಚಿನ ಪ್ರಯಾಣ ದರವನ್ನು ವಸೂಲಿ ಮಾಡಿದ್ದಕ್ಕೆ ದೂರು ನೀಡಿದರೆ ಅಂತಹ ವಾಹನದ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.