ಬೆಂಗಳೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆ ಕುರಿತು ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ‘ಹಿರಿಯ ಕಾಂಗ್ರೆಸ್ ಮುಖಂಡ ಬಿಜೆಪಿ ವೈಫಲ್ಯದ ಬಗ್ಗೆ ಜನರ ಮುಂದೆ ಇಡುತ್ತೇವೆ ಅಂತ ಹೇಳಿದ್ದಾರೆ. ಕಳೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲುವ ಮೂಲಕ ಹತಾಶರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಸ್ತಿತ್ವದ ಕಳೆದುಕೊಂಡು ಗಂಡಾಂತರದಲ್ಲಿ ಸಿಲುಕಿದೆ. ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕಿ ರೈತರನ್ನು ಎತ್ತಿ ಕಟ್ಟಲು ಮುಂದಾಗಿದ್ದಾರೆ’ ಎಂದರು.