ಹಣಮಂತರಾವ್ ಅವರು ಈ ಹಿಂದೆ ಖಾಸಗಿ ಸುದ್ದಿ ವಾಹಿನಿ ಟಿವಿ–9ನಲ್ಲಿ ಸೇವೆ ಸಲ್ಲಿಸಿದ್ದರು. ಸದ್ಯ ಬೆಂಗಳೂರು ಮೂಲದ ಖಾಸಗಿ ವಾಹಿನಿಯ ಕ್ಯಾಮೆರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಶವದ ಬಳಿ ಸಿಕ್ಕ ಗುರುತಿನ ಚೀಟಿಯಿಂದ ಇದು ಗೊತ್ತಾಗಿದೆ. ಅವರ ರುಂಡ– ಮುಂಡ ತುಂಡಾಗಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.