<p><strong>ಕಮಲಾಪುರ (ಕಲಬುರಗಿ ಜಿಲ್ಲೆ): </strong>ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಶನಿವಾರ ರಾತ್ರಿ ತಾಲ್ಲೂಕಿನ ಮಹಾಗಾಂವ ಕ್ರಾಸ್ ರಾಜ ಧಾಬಾ ಬಳಿ ನಡೆದಿದೆ. </p><p>ಕಮಲಾಪುರ ತಾಲ್ಲೂಕಿನ ಸಿರಗಾಪುರ ಗ್ರಾಮದ ಆಕಾಶ ಚಂದ್ರಕಾಂತ ಧನವಂತ (19), ಭೂಸಣಗಿ ಗ್ರಾಮದ ಸುಶೀಲ್ ಮಲ್ಲಿಕಾರ್ಜುನ (28) ಮೃತ ಯುವಕರಾಗಿದ್ದಾರೆ.</p><p>ಡಿಕ್ಕಿ ರಭಸಕ್ಕೆ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದ್ದು ಈ ಇಬ್ಬರು ಬೆಂಕಿಯಲ್ಲಿ ಬೆಂದಿದ್ದಾರೆ. ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದು, ಸುಶೀಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾನೆ. </p><p>ಆಕಾಶ ಹಾಗೂ ಸುಶೀಲ್ ಇಬ್ಬರು ಬಜಾಜ್ ಎನ್ ಎಸ್ ಬೈಕ್ ಮೇಲೆ ಸಿರಗಾಪುರದಿಂದ ಮಹಾಗಾಂವ ಕ್ರಾಸ್ ಗೆ ತೆರಳುತ್ತಿದ್ದರು.</p><p>ಹೈದರಾಬಾದ್ ನಿಂದ ಕಲಬುರಗಿಗೆ ಕಾರು ತೆರಳುತ್ತಿತ್ತು. ಎರಡರ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದೆ. </p><p>ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಶೀಲನನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದ್ದು ಫಲ ನೀಡಲಿಲ್ಲ.</p><p> ಪಿಎಸ್ಐ ಬಸವರಾಜ ಚಿತ್ತಕೋಟಿ, ಸಿಬ್ಬಂದಿ ಕಿಶನ್ ಜಾಧವ, ರಾಜಶೇಖರ, ಭೀಮಾಶಂಕರ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ (ಕಲಬುರಗಿ ಜಿಲ್ಲೆ): </strong>ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಶನಿವಾರ ರಾತ್ರಿ ತಾಲ್ಲೂಕಿನ ಮಹಾಗಾಂವ ಕ್ರಾಸ್ ರಾಜ ಧಾಬಾ ಬಳಿ ನಡೆದಿದೆ. </p><p>ಕಮಲಾಪುರ ತಾಲ್ಲೂಕಿನ ಸಿರಗಾಪುರ ಗ್ರಾಮದ ಆಕಾಶ ಚಂದ್ರಕಾಂತ ಧನವಂತ (19), ಭೂಸಣಗಿ ಗ್ರಾಮದ ಸುಶೀಲ್ ಮಲ್ಲಿಕಾರ್ಜುನ (28) ಮೃತ ಯುವಕರಾಗಿದ್ದಾರೆ.</p><p>ಡಿಕ್ಕಿ ರಭಸಕ್ಕೆ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದ್ದು ಈ ಇಬ್ಬರು ಬೆಂಕಿಯಲ್ಲಿ ಬೆಂದಿದ್ದಾರೆ. ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದು, ಸುಶೀಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾನೆ. </p><p>ಆಕಾಶ ಹಾಗೂ ಸುಶೀಲ್ ಇಬ್ಬರು ಬಜಾಜ್ ಎನ್ ಎಸ್ ಬೈಕ್ ಮೇಲೆ ಸಿರಗಾಪುರದಿಂದ ಮಹಾಗಾಂವ ಕ್ರಾಸ್ ಗೆ ತೆರಳುತ್ತಿದ್ದರು.</p><p>ಹೈದರಾಬಾದ್ ನಿಂದ ಕಲಬುರಗಿಗೆ ಕಾರು ತೆರಳುತ್ತಿತ್ತು. ಎರಡರ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದೆ. </p><p>ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಶೀಲನನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದ್ದು ಫಲ ನೀಡಲಿಲ್ಲ.</p><p> ಪಿಎಸ್ಐ ಬಸವರಾಜ ಚಿತ್ತಕೋಟಿ, ಸಿಬ್ಬಂದಿ ಕಿಶನ್ ಜಾಧವ, ರಾಜಶೇಖರ, ಭೀಮಾಶಂಕರ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>