ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತದಲ್ಲಿ ಮಹಿಳೆ ಸಾವು: ಕಾರು ಚಾಲಕನಿಗೆ 14 ತಿಂಗಳು ಜೈಲು, ₹ 5 ಸಾವಿರ ದಂಡ

Last Updated 6 ಜನವರಿ 2023, 15:49 IST
ಅಕ್ಷರ ಗಾತ್ರ

ಕಲಬುರಗಿ: ನಿರ್ಲಕ್ಷ್ಯತನದಿಂದ ಕಾರು ಓಡಿಸಿ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆದು ಹಿಂಬದಿ ಕುಳಿತಿದ್ದ ಮಹಿಳೆಯ ಸಾವಿಗೆ ಕಾರಣನಾದ ಕಾರು ಚಾಲಕ ಶಿವಣ್ಣ ಕಿತ್ತೂರ ಎಂಬಾತನಿಗೆ ಇಲ್ಲಿನ ಸಿಜೆಎಂ ನ್ಯಾಯಾಲಯವು ವಿವಿಧ ಕಲಂಗಳಡಿ 14 ತಿಂಗಳು ಜೈಲು ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದೆ.

2018ರ ಜನವರಿ 19ರಂದು ರಾತ್ರಿ 7.30ಕ್ಕೆ ಹುಮನಾಬಾದ್ ಕಡೆಯಿಂದ ಕಾರು ಚಲಾಯಿಸಿಕೊಂಡು ಬಂದ ಶಿವಣ್ಣ ಉಪಳಾಂವ ಗ್ರಾಮದ ಬಳಿಯ ಕಿರು ಸೇತುವೆ ಬಳಿ ಹೊರಟಿದ್ದ ಚಾಂದಸಾಬ್ ನದಾಫ ಹಾಗೂ ರಹಿಮತಬಿ ದಂಪತಿಯ ಬೈಕಿಗೆ ಡಿಕ್ಕಿ ಹೊಡೆಸಿದ. ಡಿಕ್ಕಿ ರಭಸಕ್ಕೆ ನೆಲಕ್ಕೆ ಬಿದ್ದ ರಹಿಮತಬಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.

ಈ ಬಗ್ಗೆ ಗ್ರಾಮೀಣ ಠಾಣೆ ಸಿಪಿಐ ವಾಜಿದ್ ಪಟೇಲ್ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶೆ ಶಾಂತಲಾ ರಮೇಶ ದೊಡ್ಡವಾಡ ಅವರು ಅಪರಾಧಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದರು.

ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಲತಾದೇವಿ ಅ. ಕಟ್ಟಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT