ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಣಗೇರಾ ಜಾತ್ರೆ ಸರಳ ಆಚರಣೆಗೆ ನಿರ್ಧಾರ

Last Updated 2 ಜನವರಿ 2021, 11:52 IST
ಅಕ್ಷರ ಗಾತ್ರ

ಕಲಬುರ್ಗಿ: ಯಡ್ರಾಮಿ ತಾಲ್ಲೂಕಿನ ಮಾಗಣಗೇರಾ ಗ್ರಾಮದಲ್ಲಿ ಜ. 7ರಂದು ನಡೆಯಬೇಕಿದ್ದ ವೀರ ತಪಸ್ವಿ ಗುರು ಚನ್ನವೃಷಭೇಂದ್ರ ಶಿವಯೋಗಿಗಳ ಹಾಗೂ ಕೆಂಭಾವಿ ಹಿರೇಮಠದ ಲಿಂ. ಅಯ್ಯಪ್ಪಯ್ಯ ಶಿವಾಚಾರ್ಯರ ಜಾತ್ರೆಯಗಳನ್ನು ರದ್ದು ಮಾಡಲಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದುಮಠದ ಪೀಠಾಧಿಪತಿ ಡಾ.ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಈ ಉತ್ಸವದ ಅಂಗವಾಗಿ ಡಿಸೆಂಬರ್‌ 28ರಿಂದ ಆರಂಭವಾದ ಲಚ್ಯಣ ಸಿದ್ಧಪ್ಪ ಮಹಾರಾಜರ ಪುರಾಣ ಕಾರ್ಯಕ್ರಮವನು ಜ. 7ರವರೆಗೂ ನಡೆಯಲಿದೆ. ಚನ್ನಯ್ಯ ಶಾಸ್ತ್ರಿ ಅರಳಗುಂಡಗಿ, ವೀರೇಶ್ ಗವಾಯಿಗಳು ಮತ್ತು ರುದ್ರಸ್ವಾಮಿ ಮೇಲಿನಮಠ ಅವರು ನಡೆಸಿಕೊಡುತ್ತಿರುವ ಈ ಪುರಾಣ ಪ್ರವಚನವನ್ನು ಎಲ್ಲ ಸುರಕ್ಷತಾ ಕ್ರಮ ಹಾಗೂ ನಿರ್ದಿಷಟ ಅಂತರ ಕಾಪಾಡುವ ಮೂಲಕ ನಡೆಸಲಾಗುತ್ತಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

ಜ. 6ರಂದು ಸಂಜೆ ತೋಂಟದಾರ್ಯರ ಕರ್ತೃ ಗದ್ದುಗೆಗೆ ದೀಪೋತ್ಸವ, 7ರಂದು ಬೆಳಿಗ್ಗೆ 6 ಗಂಟೆಗೆ ಉಭಯ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಂಜೆ 5ಕ್ಕೆ ಧರ್ಮಸಭೆ ನಡೆಯಲಿದೆ. ಆದರೆ, ತದ ನಂತರ ನಡೆಯಬೇಕಿದ್ದ ರಥೋತ್ಸವವನ್ನು ಕೈಬಿಡಲಾಗಿದೆ ಎಂದೂ ಪೂಜ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT