ಗಲಾಟೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಪೊಲೀಸ್ ಪಡೆಗಳು ಬೀಡುಬಿಟ್ಟಿದ್ದು, ಹಲವು ಯುವಕರು ಗ್ರಾಮ ತೊರೆದು ತಮ್ಮ ಮೊಬೈಲ್ಗಳನ್ನು ಸ್ವಿಚ್ಆಫ್ ಮಾಡಿಕೊಂಡಿದ್ದಾರೆ. ಜಾತ್ರೆಯ ಅಂಗವಾಗಿ ಮಂಗಳವಾರ ನಡೆಯಬೇಕಿದ್ದ ಕುಸ್ತಿ, ನಾಟಕ ಪ್ರದರ್ಶನವೂ ರದ್ದಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.