<p><strong>ಆಳಂದ:</strong> ತಾಲ್ಲೂಕಿನ ಕಡಗಂಚಿ ಗ್ರಾಮದ ಶಾಂತಲಿಂಗೇಶ್ವರ ಜಾತ್ರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ನಡೆದ ಗಲಾಟೆಯ ಆರೋಪದಡಿ ಸುಮಾರು 40 ಜನರ ಮೇಲೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗಲಾಟೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಪೊಲೀಸ್ ಪಡೆಗಳು ಬೀಡುಬಿಟ್ಟಿದ್ದು, ಹಲವು ಯುವಕರು ಗ್ರಾಮ ತೊರೆದು ತಮ್ಮ ಮೊಬೈಲ್ಗಳನ್ನು ಸ್ವಿಚ್ಆಫ್ ಮಾಡಿಕೊಂಡಿದ್ದಾರೆ. ಜಾತ್ರೆಯ ಅಂಗವಾಗಿ ಮಂಗಳವಾರ ನಡೆಯಬೇಕಿದ್ದ ಕುಸ್ತಿ, ನಾಟಕ ಪ್ರದರ್ಶನವೂ ರದ್ದಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಪರಿಶಿಷ್ಟ ಜಾತಿಯ ಸಮುದಾಯದವರು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ ಮತ್ತೊಂದು ಸಮುದಾಯದ ಗುಂಪು ಗ್ರಾಮದಲ್ಲಿ ಪ್ರತಿಭಟನೆ ನಡೆಸಿತು. ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಮಹಿಳೆಯರು, ಪುರುಷರು ತಾವು ನೀಡುವ ದೂರನ್ನೂ ದಾಖಲಿಸಿಕೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದರು.</p>.<p>ಮಧ್ಯಾಹ್ನ 1ರಿಂದ ಶುರುವಾದ ರಸ್ತೆ ತಡೆಯು 3 ಗಂಟೆಯ ವರೆಗೆ ನಡೆಯಿತು. ಇದರಿಂದ ಎರಡೂ ಕಡೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಧಾವಿಸಿದ ಡಿವೈಎಸ್ಪಿ ಮೊಹ್ಮದ್ ಶರೀಫ್ ಅವರು, ಪ್ರತಿಭಟನಾಕಾರರಿಗೆ ಕ್ರಮದ ಭರವಸೆ ನೀಡಿದ ನಂತರ ರಸ್ತೆ ತಡೆ ಹಿಂತೆಗೆದುಕೊಂಡರು.</p>.<p>ಸೋಮವಾರ ರಾತ್ರಿಯೇ ಎಸ್ಪಿ ಅಕ್ಷಯ್ ಹಾಕೆ, ಹೆಚ್ಚುವರಿ ಎಸ್ಪಿ ಎನ್. ಶ್ರೀನಿಧಿ, ಸಿಪಿಐ ಸಿದ್ರಾಮಯ್ಯ ಮಠಪತಿ ಸೇರಿದಂತೆ ಹಲವು ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು. ವಾತಾವರಣವನ್ನು ತಿಳಿಗೊಳಿಸಿದ್ದಾರೆ ಎಂದು ಗ್ರಾಮಸ್ಥರೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ:</strong> ತಾಲ್ಲೂಕಿನ ಕಡಗಂಚಿ ಗ್ರಾಮದ ಶಾಂತಲಿಂಗೇಶ್ವರ ಜಾತ್ರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ನಡೆದ ಗಲಾಟೆಯ ಆರೋಪದಡಿ ಸುಮಾರು 40 ಜನರ ಮೇಲೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗಲಾಟೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಪೊಲೀಸ್ ಪಡೆಗಳು ಬೀಡುಬಿಟ್ಟಿದ್ದು, ಹಲವು ಯುವಕರು ಗ್ರಾಮ ತೊರೆದು ತಮ್ಮ ಮೊಬೈಲ್ಗಳನ್ನು ಸ್ವಿಚ್ಆಫ್ ಮಾಡಿಕೊಂಡಿದ್ದಾರೆ. ಜಾತ್ರೆಯ ಅಂಗವಾಗಿ ಮಂಗಳವಾರ ನಡೆಯಬೇಕಿದ್ದ ಕುಸ್ತಿ, ನಾಟಕ ಪ್ರದರ್ಶನವೂ ರದ್ದಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಪರಿಶಿಷ್ಟ ಜಾತಿಯ ಸಮುದಾಯದವರು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ ಮತ್ತೊಂದು ಸಮುದಾಯದ ಗುಂಪು ಗ್ರಾಮದಲ್ಲಿ ಪ್ರತಿಭಟನೆ ನಡೆಸಿತು. ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಮಹಿಳೆಯರು, ಪುರುಷರು ತಾವು ನೀಡುವ ದೂರನ್ನೂ ದಾಖಲಿಸಿಕೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದರು.</p>.<p>ಮಧ್ಯಾಹ್ನ 1ರಿಂದ ಶುರುವಾದ ರಸ್ತೆ ತಡೆಯು 3 ಗಂಟೆಯ ವರೆಗೆ ನಡೆಯಿತು. ಇದರಿಂದ ಎರಡೂ ಕಡೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಧಾವಿಸಿದ ಡಿವೈಎಸ್ಪಿ ಮೊಹ್ಮದ್ ಶರೀಫ್ ಅವರು, ಪ್ರತಿಭಟನಾಕಾರರಿಗೆ ಕ್ರಮದ ಭರವಸೆ ನೀಡಿದ ನಂತರ ರಸ್ತೆ ತಡೆ ಹಿಂತೆಗೆದುಕೊಂಡರು.</p>.<p>ಸೋಮವಾರ ರಾತ್ರಿಯೇ ಎಸ್ಪಿ ಅಕ್ಷಯ್ ಹಾಕೆ, ಹೆಚ್ಚುವರಿ ಎಸ್ಪಿ ಎನ್. ಶ್ರೀನಿಧಿ, ಸಿಪಿಐ ಸಿದ್ರಾಮಯ್ಯ ಮಠಪತಿ ಸೇರಿದಂತೆ ಹಲವು ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು. ವಾತಾವರಣವನ್ನು ತಿಳಿಗೊಳಿಸಿದ್ದಾರೆ ಎಂದು ಗ್ರಾಮಸ್ಥರೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>