ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್, ‘ಸರ್ಕಾರಿ ಕರ್ತವ್ಯಕ್ಕೆ ಅಡೆತಡೆವೊಡಿದ್ದಾರೆ ಎಂದು ಪಿಎಸ್ಐ ದೂರು ದಾಖಲಿಸಿದ್ದಾರೆ. ಶರಣು ಸಲಗರ ಠಾಣೆಯಲ್ಲಿ ಏರು ದನಿಯಲ್ಲಿ ಪಿಎಸ್ಐ ಅವರ ವಿರುದ್ಧ ಮಾತನಾಡಿರುವ ವಿಡಿಯೋ ದೃಶ್ಯಾವಳಿಯನ್ನು ಪರಿಶೀಲಿಸಿ ದೂರು ದಾಖಲು ಮಾಡಿಕೊಳ್ಳಲಾಗಿದೆ’ ಎಂದರು.