ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ ಚಿಲ್, ಜಿಲ್ಲಾ ಪೊಲೀಸ್ ಇಲಾಖೆ ಬೆರಳಚ್ಚು ವಿಭಾಗದ ಸಿಪಿಐ ಆಗಿದ್ದ ಆನಂದ ಮೇತ್ರಿ, ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರ ಗನ್ಮ್ಯಾನ್ ಆಗಿದ್ದ ಹಯ್ಯಾಳಿ ದೇಸಾಯಿ, ರುದ್ರಗೌಡ ಪಾಟೀಲ, ಸೊಲ್ಲಾಪುರದ ಮರಳು ಉದ್ಯಮಿ ಸುರೇಶ ಕಾಟೇಗಾಂವ ಸೇರಿದಂತೆ ಇತರರಿಂದ ₹ 11 ಲಕ್ಷ ಹಣ ಜಪ್ತಿ ಮಾಡಿದ್ದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.