ಕಲಬುರಗಿ: ‘ಪ್ರಧಾನಿ, ಉಪಪ್ರಧಾನಿ ಯಾರಗಾಬೇಕು ಎಂಬ ವಿಚಾರದಲ್ಲಿ ನಾಯಕರಿಗೆ ಜಾತಿಯ ಲೇಪನ ಹಚ್ಚುವುದು ತಪ್ಪು. ಆ ಸಮುದಾಯದಲ್ಲಿನವರ (ಪರಿಶಿಷ್ಟ ಜಾತಿ) ದಕ್ಷತೆ ನೋಡುವುದಿಲ್ಲವಾ? ಅವರೂ ಸಮರ್ಥರಲ್ಲವಾ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳುವ ಮೂಲಕ ತಮ್ಮ ತಂದೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂದು ಪರೋಕ್ಷವಾಗಿ ಸಮರ್ಥಿಸಿಕೊಂಡರು.