<p><strong>ವಾಡಿ:</strong> ಕಳೆದುಹೋದ ಅಥವಾ ಕಳುವಾದ ಫೋನ್ಗಳನ್ನು ಪತ್ತೆಹಚ್ಚುವಲ್ಲಿ ಸಿಇಐಆರ್ ದೊಡ್ಡ ಮಟ್ಟಿಗೆ ಸಹಾಯ ಮಾಡಿದೆ. ಒಮ್ಮೆ ಫೋನ್ ಸ್ವಿಚ್ ಆನ್ ಆದ ತಕ್ಷಣ ನಮಗೆ ಸ್ಥಳದ ಮಾಹಿತಿ ಸಿಗುತ್ತದೆ ಮತ್ತು ನಾವು ಕಾರ್ಯಪ್ರವೃತ್ತರಾಗುತ್ತೇವೆ ಎಂದು ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ತಿಳಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಕಳುವಾಗಿದ್ದ ಒಟ್ಟು 15 ಮೊಬೈಲ್ ಫೋನ್ಗಳನ್ನು ಪತ್ತೆ ಹಚ್ಚಿ, ಅವುಗಳ ವಾರಸುದಾರರಿಗೆ ಹಸ್ತಾಂತರಿಸಿದ ಬಳಿಕ ಅವರು ಮಾತನಾಡಿದರು.</p>.<p>ಭಾರತ ಸರ್ಕಾರವು ಕಳೆದುಹೋದ ಅಥವಾ ಕಳುವಾದ ಮೊಬೈಲ್ ಫೋನ್ಗಳನ್ನು ಪತ್ತೆಹಚ್ಚಲು ಮತ್ತು ಬ್ಲಾಕ್ ಮಾಡಲು ಪರಿಚಯಿಸಿದ ‘ಸಂಚಾರ್ ಸಾಥಿ’ ಪೋರ್ಟಲ್ ಮತ್ತು ಅದರಲ್ಲಿರುವ ಸಿಇಐಆರ್ ತಂತ್ರಾಂಶವು ಅತ್ಯಂತ ಯಶಸ್ವಿಯಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಈ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದೆ. ಸಾರ್ವಜನಿಕರು ತಮ್ಮ ಫೋನ್ ಕಳೆದುಹೋದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು ಎಂದು ಸೂಚಿಸಿದರು.</p>.<p>ಪಿಎಸ್ಐ ತಿರುಮಲೇಶ ಕೆ. ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮೊಬೈಲ್ನ ಇಎಂಇಐ ಸಂಖ್ಯೆಯನ್ನು ಕಡ್ಡಾಯವಾಗಿ ಎಲ್ಲಾದರೂ ಬರೆದಿಟ್ಟುಕೊಳ್ಳಬೇಕು. ಸಂಚಾರ್ ಸಾಥಿ ಪೋರ್ಟಲ್ ಅಥವಾ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಿ ದೂರು ಸಲ್ಲಿಸುವಾಗ ಇಎಂಇಐ ಸಂಖ್ಯೆಯನ್ನು ತಪ್ಪದೇ ನಮೂದಿಸಬೇಕು ಎಂದುಸಲಹೆ ನೀಡಿದರು.</p>.<p>ಈ ವೇಳೆ ಕ್ರೈಂ ಪಿಎಸ್ಐ ರೇಣುಕಾ ಉಡಗಿ, ಎಎಸ್ಐ ಶರಣಪ್ಪ ಜಾಂಜಿ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ:</strong> ಕಳೆದುಹೋದ ಅಥವಾ ಕಳುವಾದ ಫೋನ್ಗಳನ್ನು ಪತ್ತೆಹಚ್ಚುವಲ್ಲಿ ಸಿಇಐಆರ್ ದೊಡ್ಡ ಮಟ್ಟಿಗೆ ಸಹಾಯ ಮಾಡಿದೆ. ಒಮ್ಮೆ ಫೋನ್ ಸ್ವಿಚ್ ಆನ್ ಆದ ತಕ್ಷಣ ನಮಗೆ ಸ್ಥಳದ ಮಾಹಿತಿ ಸಿಗುತ್ತದೆ ಮತ್ತು ನಾವು ಕಾರ್ಯಪ್ರವೃತ್ತರಾಗುತ್ತೇವೆ ಎಂದು ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ತಿಳಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಕಳುವಾಗಿದ್ದ ಒಟ್ಟು 15 ಮೊಬೈಲ್ ಫೋನ್ಗಳನ್ನು ಪತ್ತೆ ಹಚ್ಚಿ, ಅವುಗಳ ವಾರಸುದಾರರಿಗೆ ಹಸ್ತಾಂತರಿಸಿದ ಬಳಿಕ ಅವರು ಮಾತನಾಡಿದರು.</p>.<p>ಭಾರತ ಸರ್ಕಾರವು ಕಳೆದುಹೋದ ಅಥವಾ ಕಳುವಾದ ಮೊಬೈಲ್ ಫೋನ್ಗಳನ್ನು ಪತ್ತೆಹಚ್ಚಲು ಮತ್ತು ಬ್ಲಾಕ್ ಮಾಡಲು ಪರಿಚಯಿಸಿದ ‘ಸಂಚಾರ್ ಸಾಥಿ’ ಪೋರ್ಟಲ್ ಮತ್ತು ಅದರಲ್ಲಿರುವ ಸಿಇಐಆರ್ ತಂತ್ರಾಂಶವು ಅತ್ಯಂತ ಯಶಸ್ವಿಯಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಈ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದೆ. ಸಾರ್ವಜನಿಕರು ತಮ್ಮ ಫೋನ್ ಕಳೆದುಹೋದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು ಎಂದು ಸೂಚಿಸಿದರು.</p>.<p>ಪಿಎಸ್ಐ ತಿರುಮಲೇಶ ಕೆ. ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮೊಬೈಲ್ನ ಇಎಂಇಐ ಸಂಖ್ಯೆಯನ್ನು ಕಡ್ಡಾಯವಾಗಿ ಎಲ್ಲಾದರೂ ಬರೆದಿಟ್ಟುಕೊಳ್ಳಬೇಕು. ಸಂಚಾರ್ ಸಾಥಿ ಪೋರ್ಟಲ್ ಅಥವಾ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಿ ದೂರು ಸಲ್ಲಿಸುವಾಗ ಇಎಂಇಐ ಸಂಖ್ಯೆಯನ್ನು ತಪ್ಪದೇ ನಮೂದಿಸಬೇಕು ಎಂದುಸಲಹೆ ನೀಡಿದರು.</p>.<p>ಈ ವೇಳೆ ಕ್ರೈಂ ಪಿಎಸ್ಐ ರೇಣುಕಾ ಉಡಗಿ, ಎಎಸ್ಐ ಶರಣಪ್ಪ ಜಾಂಜಿ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>